ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಸರ್ಕಾರವನ್ನು ಬಾಂಬೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಏಕನಾಥ್ ಶಿಂದೆ ಅವರ ಹುಟ್ಟೂರಿಗೆ ರಸ್ತೆ, ಸೇತುವೆ ಇಲ್ಲ. ಆದರೆ ಎರಡು ಹೆಲಿಪ್ಯಾಡ್ಗಳು ಇವೆ. ಶಾಲೆಗೆ ಹೋಗಲು ವಿದ್ಯಾರ್ಥಿಗಳು ನಿತ್ಯ ಇನ್ನಿಲ್ಲದ ರೀತಿಯ ತೊಂದರೆ ಅನುಭವಿಸಬೇಕಾಗಿದೆ. ಈ ಸ್ಥಿತಿಯ ಕುರಿತು ಹೈಕೋರ್ಟ್ನಲ್ಲಿ ವಿಚಾರಣೆ ನಡೆದಿದೆ.
ಹಳ್ಳಿಗಳಲ್ಲಿ ಹೆಲಿಪ್ಯಾಡ್ಗಳಿರುವ ಬಗ್ಗೆ ನಮಗೆ ಯಾವುದೇ ರೀತಿಯ ಆಕ್ಷೇಪ ಇಲ್ಲ. ಆದರೆ, ಉತ್ತಮ ರಸ್ತೆ ನಿರ್ಮಾಣ ಮಾಡಿ. ಇದರಿಂದ ಮಕ್ಕಳು ಶಾಲೆಗೆ ಹೋಗಬಹುದು ಎಂದು ನ್ಯಾಯಮೂರ್ತಿ ಪಿಬಿ ವರಾಲೆ ನೇತೃತ್ವದ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.
ಸರಿಯಾದ ರಸ್ತೆ ಇಲ್ಲದ ಕಾರಣ ವಿದ್ಯಾರ್ಥಿಗಳು ಇನ್ನಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂದೆ ಮೂಲತಃ ಸತಾರಾದವರು. ಹೀಗಾಗಿ, ರಾಜ್ಯ ಸರ್ಕಾರ ಸಕಾರಾತ್ಮಕ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದೆ. ಜೊತೆಗೆ ಆಗಸ್ಟ್ 30ರೊಳಗೆ ಅಫಡವಿಟ್ ಸಲ್ಲಿಕೆಗೆ ಸೂಚನೆ ನೀಡಿದೆ.