ನನ್ನ ಹತ್ಯೆಗೆ ಸಂಚು ನಡೆದಿದ್ದು, ನ್ಯಾಯಾಂಗ ತನಿಖೆ ಆಗಬೇಕು: ಸಿಟಿ ರವಿ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನನ್ನ ವಿರುದ್ಧ ಕೊಲೆಗೆ ಸಂತು ರೂಪಿಸಿದ್ದರು. ಆದರೆ ಅವರು ಯಾರು ಎಂಬುದನ್ನು ತಿಳಿದುಕೊಳ್ಳಲು ನ್ಯಾಯಾಂಗ ತನಿಖೆ ಆಗಬೇಕು ಎಂದು ಸಿಟಿ ರವಿ ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಕಿಟಾಕಿ ಮೂಲಕ ಸೂಚನೆ ಬಂದರೆ ಉಳಿದೆಲ್ಲವೂ ಫೋನ್‌ ಮೂಲಕ ಸೂಚನೆ ಬರುತ್ತಿತ್ತು. ಪೊಲೀಸರ ಬಳಿ ಎರಡು, ಮೂರು ಫೋನ್‌ಗಳಿದ್ದವು. ಹಿರಿಯ ಅಧಿಕಾರಿಗಳು ಅಥವಾ ಮಂತ್ರಿಯಿಂದ ನಿರಂತರ ಫೋನ್ ಬರುತ್ತಿತ್ತು. ನಾನು ಕ್ರಿಮಿನಲ್ ಅಲ್ಲ, ಯಾಕೆ ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಅವರು ಪ್ರಶ್ನಿಸಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಥವಾ ಡಿಕೆ ಶಿವಕುಮಾರ್ ಅಥವಾ ಯಾರು ನನ್ನ ವಿರುದ್ಧ ಸಂಚು ಮಾಡಿದ್ದಾರೆ ಎನ್ನುವುದರ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಪೊಲೀಸರ ವೈಯಕ್ತಿಕ, ಇಲಾಖೆ ಫೋನ್‌ಗಳ ಕಾಲ್ ರೆಕಾರ್ಡ್‌, ಜಿಪಿಎಸ್ ಟ್ರ‍್ಯಾಕ್ ಮಾಡಿ ತನಿಖೆ ಆಗಬೇಕು. ಪೊಲೀಸರು ಸರ್ ಸರ್ ಅಂತ ಮಾತನಾಡುತ್ತಿದ್ದರು. ಅವರ ಭಾವ ಭಂಗಿ ನೋಡಿದರೆ ಕರೆ ಮಾಡುತ್ತಿರುವ ವ್ಯಕ್ತಿ ಹಿರಿಯ ಅಧಿಕಾರಿ ಇದ್ದಿರಬಹುದು ಅಥವಾ ಮಂತ್ರಿಯೂ ಇರಬಹುದು ಎಂದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!