ಹೊಸದಿಗಂತ ವರದಿ ಹುಬ್ಬಳ್ಳಿ:
ಬಿಜೆಪಿ ಸೋತಿರುವ ನಾಯಕರನ್ನು ಸೆಳೆಯುವ ಕೆಲಸವನ್ನು ನಾವು ಮಾಡುತ್ತಿಲ್ಲ. ಆ ಪಕ್ಷದಲ್ಲಿ ಅಸಮಾಧಾನ, ಬಿರುಕಿದ್ದು, ಯಾವ ಸ್ಪೋಟಗೊಳ್ಳುತ್ತದೆ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ ಹೇಳಿದರು.
ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋತಿರುವ ಬಿಜೆಪಿ ನಾಯಕರನ್ನು ಸೆಳೆಯುವ ಕೆಲಸವನ್ನು ನಾವು ಮಾಡುತ್ತಿಲ್ಲ. ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಬೇಕಾದ ವಿಷಯವನ್ನು ಸಂಸದ ಪ್ರತಾಪಸಿಂಹ ಅವರು ಬಹಿರಂಗವಾಗಿ ಹೇಳಿದ್ದಾರೆ. ಒಳ ಒಪ್ಪಂದ ಮಾಡಿಕೊಂಡಿರುವ ತಮ್ಮ ನಾಯಕರ ಹೆಸರನ್ನು ಅವರು ಬಹಿರಂಗ ಪಡಿಸಬೇಕು. ಇದು ಜನರಿಗೆ ಗೊತ್ತಾಗಬೇಕು. ಇಲ್ಲದಿದ್ದರೆ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗುತ್ತಾರೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕಡೆ ಪ್ರವಾಸ ಮಾಡುತ್ತೇನೆ. ಉತ್ತರ ಕರ್ನಾಟಕ ಭಾಗದ 11 ಸ್ಥಾನಗಳಲ್ಲಿ 7 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ. ಪಕ್ಷವು ನನ್ನ ಅನುಭವ ಬಳಸಿಕೊಳ್ಳಲಿದೆ ಎಂದರು.