ಹೆಚ್ಚಿನ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ: ಅರುಣ ಶಹಾಪುರ

ಹೊಸದಿಗಂತ ವರದಿ ವಿಜಯಪುರ:
ಚುನಾವಣೆಯಲ್ಲಿ ಹೆಚ್ಚಿನ ಅಂತರದಲ್ಲಿ ಮೊದಲ ಸುತ್ತಿನಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ವಾಯವ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ಹೇಳಿದರು.

ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಮತದಾನದ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲೂ ನಮಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಯಾವುದೇ ಭಿನ್ನಾಭಿಪ್ರಾಯವಿಲ್ಲ.‌ ಹೊಂದಾಣಿಕೆ ರಾಜಕಾರಣದ ಆರೋಪದ ಬಗ್ಗೆ ಫಲಿತಾಂಶದ ದಿನ ಉತ್ತರ ಸಿಗುತ್ತದೆ. ಕಾಂಗ್ರೆಸ್ ಅಭ್ಯರ್ಥಿ ಹತಾಶರಾಗಿ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದಾರೆ ಎನಿಸುತ್ತಿದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!