ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಡಿಯೂರಪ್ಪನವರ ಕುಟುಂಬ ದೇಶದ ಪ್ರಾಮಾಣಿಕ ಕುಟುಂಬ, ವಿಜಯೇಂದ್ರ ಕೂಡ ಅಪ್ಪಟ ಚಿನ್ನ, ಬಂಗಾರ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ವಕ್ಫ್ಗಾಗಿ ಹೋರಾಟ ನಡೆಸುತ್ತಿದ್ದು, ಯಡಿಯೂರಪ್ಪ ಅವರ ಕುಟುಂಬ ಮತ್ತು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿಲ್ಲ. ಯಡಿಯೂರಪ್ಪನವರ ಕುಟುಂಬ ಪ್ರಾಮಾಣಿಕ ಕುಟುಂಬವಾಗಿದ್ದು, ವಿಜಯೇಂದ್ರ ಕೂಡ ಅಪ್ಪಟ ಬಂಗಾರ ಅಂತ ಹೇಳಲು ಬಯಸುತ್ತೇನೆ ಎಂದು ವ್ಯಂಗ್ಯವಾಡಿದ್ದರೆ.
ಅವರಿಗೆ ಭ್ರಷ್ಟಾಚಾರ ಎಂದರೇನು ಎಂಬುದು ಗೊತ್ತಿಲ್ಲ. ವಿಜಯೇಂದ್ರ ಅವರು ವಿರೋಧ ಪಕ್ಷದೊಂದಿಗೆ ಸಹಕರಿಸಿದ್ದಕ್ಕೆ ನನ್ನ ಬಳಿ ಪುರಾವೆ ಇದೆ. ಶೀಘ್ರದಲ್ಲೇ ದಾಖಲೆ ಬಿಡುಗಡೆ ಮಾಡುತ್ತೇನೆ. ವಿಜಯೇಂದ್ರ ಸದನದ ಬಾವಿಯಲ್ಲಿಯೇ ಡಿಕೆಶಿ ಅವರಿಂದ ಏನೇನು ಸಹಿ ಮಾಡಿಸಿಕೊಂಡರು ಎಂಬುವ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ. ಇಪ್ಪತ್ತು ಪತ್ರಗಳಿಗೆ ಸಹಿ ಮಾಡಿಸಿಕೊಂಡಿದ್ದೀರಿ, ವಿಡಿಯೋ ಬಿಡುಗಡೆ ಮಾಡಲಾ? ವಿಜಯೇಂದ್ರ ಎಂದು ಕಿಡಿಕಾರಿದ್ದಾರೆ.