ಹೊಸದಿಗಂತ ಡಿಜಿಟಲ್ ಡೆಸ್ಕ್:
ಒತ್ತುವರಿ ವಿಚಾರದಲ್ಲಿ ರಾಜಕಾರಣಿಗಳು, ಬಡವರು, ಶ್ರೀಮಂತರು ಯಾರೇ ಇರಲಿ ತೆರವು ನಿಶ್ಚಿತ. ಬೆಂಗಳೂರು ನಗರದಾದ್ಯಂತ ಮುಂದಿನ ದಿನಗಳಲ್ಲಿ ಒತ್ತುವರಿ ತೆರವು ಗೊಳಿಸಲಾಗುವುದು ಎಂದು ಸಚಿವ ಆರ್ ಅಶೋಕ್ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸದ್ಯಕ್ಕೆ ಎರಡು ವಲಯಗಳಲ್ಲಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಬಡವರು ಮಾಡಿರುವ ಒತ್ತುವರಿ ತೆರವು ಮಾಡಲು ಮಾಧ್ಯಮದವರು ಬಿಡುತ್ತಿಲ್ಲ. ಶ್ರೀಮಂತರು ಮಾಡಿರುವ ಒತ್ತುವರಿ ತೆರವಿಗೆ ಕಾಂಗ್ರೆಸ್ನವರು ಬಿಡುತ್ತಿಲ್ಲ ಎಂದರು.
ಮುಂದಿನ ದಿನಗಳಲ್ಲಿ ರಾಜಕಾರಣಿಗಳೇ ಆಗಿರಲಿ, ಬಡವರೇ ಆಗಿರಲಿ, ಶ್ರೀಮಂತರೇ ಆಗಿರಲಿ ಎಲ್ಲವನ್ನು ಒತ್ತುವರಿ ತೆರವು ಮಾಡಲಾಗುವುದು. ನಿರಂತರವಾಗಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ನಿರ್ಧಾರ ಮಾಡಲಾಗಿದೆ. ಬಡವರಿಗೆ ನೆರವು ನೀಡುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.