ಸಿದ್ದರಾಮಯ್ಯ, ಡಿಕೆಶಿ ನಡುವೆ ಯಾವ ಭಿನ್ನಾಭಿಪ್ರಾಯವೂ ಇಲ್ಲ: ಸುರ್ಜೇವಾಲಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.

ರಾಜ್ಯ ಕಾಂಗ್ರೆಸ್ ಕಿತ್ತಾಟ, ಪವರ್ ಶೇರಿಂಗ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನೀವು ಒಗ್ಗಟ್ಟಿನ ಸರ್ಕಾರದ ಬಗ್ಗೆ ಪ್ರಶ್ನೆ ಕೇಳುತ್ತಿದ್ದೀರಿ, ನಮ್ಮದು ಒಗ್ಗಟ್ಟಿನ ಸರ್ಕಾರ. ನಮ್ಮಲ್ಲಿ ಒಗ್ಗಟ್ಟಿದೆ, ಏನೇ ಇದ್ದರೂ ಹೈಕಮಾಂಡ್ ಬಿಗ್‌ಬಾಸ್‌ನಿಂದ ಸಂದೇಶ ಬರುತ್ತದೆ. ಇದೆಲ್ಲಾ ಒಂದು ಗುಂಪಿನ ಮಾಧ್ಯಮಗಳ ಸೃಷ್ಟಿಯಷ್ಟೇ. ಕರ್ನಾಟಕ ಸರ್ಕಾರದ ಗ್ಯಾರಂಟಿಗಳು ಜನರಲ್ಲಿ ವಿಶ್ವಾಸ ಮೂಡಿಸಿದೆ. ಆದರೆ ಬಿಜೆಪಿಯಲ್ಲಿ ಎಲ್ಲ ನಾಯಕರು ಭಿನ್ನಾಭಿಪ್ರಾಯ ಹೊಂದಿದ್ದಾರೆ. ಅವರು ತಮ್ಮ ಭಿನ್ನಾಭಿಪ್ರಾಯ ಮುಚ್ಚಿಕೊಳ್ಳಲು ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಅವರು ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಅಟ್ಯಾಕ್ ಮಾಡಲು ಆಗ್ತಿಲ್ಲ. ಹಾಗಾಗಿ ಕರ್ನಾಟಕದ ಜನರ ಮೇಲೆ ರಾಜಕೀಯ ದಾಳಿ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!