ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯ ಇಲ್ಲ: ಪಿ.ಎಚ್‌.ಪೂಜಾರ

ಹೊಸದಿಗಂತ ವರದಿ ಬಾಗಲಕೋಟೆ:

ಮುಂಬರುವ 2023ನೇ ವಿಧಾನಸಭೆಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಬಹುಮತದೊಂದಿಗೆ ಮತ್ತೊಮ್ಮೆ ತನ್ನ ಸಾಧನೆ ಮೂಲಕ ಅಧಿಕಾರಕ್ಕೆ ಬರಲಿದೆ. ಜಿಲ್ಲೆಯ ಏಳು ವಿಧಾನಸಭೆಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಹಮ್ಮಿಕೊಂಡಿರುವ ಬಿಜೆಪಿ ಬೂತ ವಿಜಯ ಅಭಿಯಾನದಲ್ಲಿ ಶುಕ್ರವಾರ ಭಾಗವಹಿಸಿ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನಪರ ಕೊಡುಗೆ ಪ್ರತಿ ಮನೆ ಮನೆಗೆ ತಲುಪಿದೆ. ನಿರುದ್ಯೋಗ ಸಮಸ್ಯೆ, ಯುವರಕರಿಗೆ ಉದ್ಯೋಗ, ರೈತರ ಆದಾಯ ದ್ವಿಗುಣಗೊಳಿಸುವುದು, ಮಹಿಳೆಯರಿಗೆ ಉಜ್ವಲ ಯೋಜನೆ ಮೂಲಕ ಅನುಕೂಲತೆ ಕಲ್ಪಿಸುವುದು, ಸ್ವಸಹಾಯ ಸಂಘಗಳಿಗೆ ಸಹಾಯಧನ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಸರ್ಕಾರ ನೀಡಿದೆ. ಇವೆಲ್ಲವನ್ನು ಮೆಚ್ಚಿ ಬಿಜೆಪಿಯನ್ನು ಜನ ಬೆಂಬಲಿಸಲಿದ್ದಾರೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಂದು ಯೋಜನೆಯ ಲಾಭ ಫಲಾನುಭವಿಗಳಿಗೆ ತಲುಪಿದೆ. ಬಿಜೆಪಿ ಬೂತ ಅಭಿಯಾನದಲ್ಲಿ ಪಕ್ಷದ ಕಾರ್ಯಕರ್ತರಲ್ಲದೇ ಜನರು ಕೂಡ ಸ್ವಯಂ ಪ್ರೇರಣೆಯಿಂದ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ತಮ್ಮ ಮನೆಗಳ ಮೇಲೆ ಬಿಜೆಪಿ ಬಾವುಟ ಹಾರಿಸುತ್ತಿದ್ದಾರೆ ಎಂದರು.

ರಾಜ್ಯದಾದ್ಯಂತ ನಡೆಯುತ್ತಿರುವ ಭಾರತೀಯ ಜನತಾ ಪಕ್ಷದ ಬೂತ ವಿಜಯ ಅಭಿಯಾನ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಬಾಗಲಕೋಟೆ ನಗರ, ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ಬಿಜೆಪಿ ಧ್ವಜವನ್ನು ಹಚ್ಚುವುದರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾ ರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ನಾವೆಲ್ಲಾ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಪ್ರತಿ ವಿಧಾನಸಭೆಯ ಮತಕ್ಷೇತ್ರದಲ್ಲಿ ಶಾಸಕರು, ಜಿಲ್ಲಾಧ್ಯಕ್ಷರು, ತಾಲ್ಲೂಕಾ ಅಧ್ಯಕ್ಷರು, ಮೋರ್ಚಾ ಅಧ್ಯಕ್ಷರು,ಕಾರ್ಯಕರ್ತರು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಪಕ್ಷದ ಅಭಿಮಾನಿಗಳು ಬಿಜೆಪಿ ಬೂತ ಅಭಿಯಾನದಲ್ಲಿ ನಿತ್ಯ ಭಾಗವಹಿಸುವ ಮೂಲಕ ಅಭಿಯಾನವನ್ನು ಯಶಸ್ವಿ ಮಾಡಲಾಗುತ್ತಿದೆ ಎಂದು ಹೇಳಿದರು.

ಚಂದ್ರಕಾಂತ ಕೇಸನೂರ, ಶಂಭುಗೌಡ ಪಾಟೀಲ, ಡಾ.ಶೇಖರ ಮಾನೆ, ಕೊಪ್ಪ ವಕೀಲರು, ಸಂಜೀವ ಡಿಗ್ಗಿ, ರಾಜು ಗೌಳಿ, ರಾಮು, ನ್ಯಾಯವಾದಿ ಭೂಮರಡ್ಡಿ, ಸಂಗನಗೌಡರ, ರಾಜು ನಾಯಕ ,ಮಂಜು ಬಳೂರಗಿ ಸೇರಿದಂತೆ ಇನ್ನಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!