ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಇಂದು ಕರೆಂಟ್ ಸಮಸ್ಯೆ ಎದುರಾಗಲಿದೆ ಎಂದು ಬೆಸ್ಕಾಂ ಕೇಂದ್ರ ಕಚೇರಿ ಅಧಿಕೃತ ಮಾಹಿತಿ ಹೊರಡಿಸಿದೆ.
ನಗರದ ಉತ್ತರ ಭಾಗದ ಹಲವಾರು ಪ್ರಮುಖ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಕೆಪಿಟಿಸಿಎಲ್ನ 66/11 ಕೆವಿ ಎಲ್.ಆರ್. ಬಂಡೆ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಮತ್ತು ಅಪ್ಗ್ರೇಡೇಶನ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಈ ವಿದ್ಯುತ್ ಕಡಿತಕ್ಕೆ ಮುಂದಾಗಿದೆ.
ಈ ಕಾಮಗಾರಿಯಿಂದಾಗಿ ಎಲ್.ಆರ್. ಬಂಡೆ ಉಪಕೇಂದ್ರದ ವ್ಯಾಪ್ತಿಯಲ್ಲಿರುವ ಸುಮಾರು 35ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಮಧ್ಯಂತರವಾಗಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ. ವಿದ್ಯುತ್ ಕಡಿತದ ಸಮಯದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ಸಾರ್ವಜನಿಕರು ಬೆಸ್ಕಾಂ ಹೆಲ್ಪ್ಲೈನ್ 1912ಗೆ ಕರೆ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
66/11 ಕೆವಿ ಎಲ್.ಆರ್.ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಡಿತ ಉಂಟಾಗಲಿದ್ದು, ಇಂದು ಬೆಳಗ್ಗೆ 10 ರಿಂದ ಸಂಜೆ 6ಗಂಟೆ ವರೆಗೆ ಕರೆಂಟ್ ಸಮಸ್ಯೆ ಎದುರಾಗಲಿದೆ. ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಬೆಸ್ಕಾಂ ಕೇಂದ್ರ ಕಚೇರಿ ಅಧಿಕೃತ ಮಾಹಿತಿ ಹೊರಡಿಸಿದೆ.

