ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ : ಎಚ್​ಡಿ ದೇವೇಗೌಡ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್​ಡಿ ದೇವೇಗೌಡ ಮತ್ತೊಮ್ಮೆ ಘೋಷಣೆ ಮಾಡಿದ್ದಾರೆ.

ಹಾಸನ ಜಿಲ್ಲೆಯ ಬೇಲೂರಿನಲ್ಲಿಂದ ಜೆಡಿಎಸ್​ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ದೇವೇಗೌಡರು ನಿಲ್ಲಬೇಕು ಅಂತಾರೆ.ಆದ್ರೆ, ನಾನು ಈಗಾಗಲೆ ಹೇಳಿದ್ದು, ಎಲ್ಲೂ ನಿಲ್ಲುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಓರ್ವ ಯುವಕನನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಮನವಿ ಮಾಡಿದರು. ಈ ಮೂಲಕ ಪರೋಕ್ಷವಾಗಿ ಮತ್ತೊಮ್ಮೆ ಪ್ರಜ್ವಲ್ ರೇವಣ್ಣ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ವ್ಹೀಲ್ ಚೇರ್ ನಲ್ಲಿ ಬಂದು ಚನ್ನಕೇಶವ ನ ದರುಶನ ಪಡೆದು ಕೊಂಡಿದ್ದೇನೆ. ಈ ರಾಷ್ಟದ ಚುನಾವಣೆ ತುಂಬಾ ವಿಭಿನ್ನವಾಗಿದೆ. ನಿಮ್ಮ ಇಷ್ಡು ವರ್ಷ ದ ರಾಜಕೀಯ ಜೀವನದಲ್ಲಿ ಜಾತ್ಯಾತೀತ ತತ್ವದಡಿ ಕೆಲಸ ಮಾಡಿದ್ರಿ. ಆದರೆ ಕೊನೆಯ ಘಟ್ಟದಲ್ಲಿ ಯಾಕೆ ಮಾರ್ಪಾಡು ಅಂತಾ ಕೇಳ್ತಾರೆ. ಹೌದು ಮಾರ್ಪಾಡು ಮಾಡಿದ್ದೇನೆ. ನಾನು ಮೊಮ್ಮಗನ ಗೆಲ್ಲಿಸಿ ಅಂತಾ ಬಂದಿಲ್ಲ. ಈ ಜಿಲ್ಲೆಯ ಅಭಿವೃದ್ಧಿಗಾಗಿ ಬಂದಿದ್ದೇನೆ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!