ʼಜೈನ ಮುನಿ ಕಾಮಕುಮಾರ ನಂದಿ‌ ಮಹರಾಜರ ಹತ್ಯೆ ತನಿಖೆಯಲ್ಲಿ ತಾರತಮ್ಯದ ಪ್ರಶ್ನೆಯೇ ಇಲ್ಲʼ

ಹೊಸದಿಗಂತ ವರದಿ ಹುಬ್ಬಳ್ಳಿ:

ಭೀಕರವಾಗಿ ಹತ್ಯೆಗೀಡಾಗಿದ್ದ ಜೈನ ಮುನಿ ಕಾಮಕುಮಾರ ನಂದಿ‌ ಮಹರಾಜರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವಿಚಾರದಲ್ಲಿ ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ನಡೆದಾಗ ಯಾರೂ ಕೂಡ ತಾರತಮ್ಯ ಮಾಡೋಕೆ ಹೋಗೋದಿಲ್ಲ. ಅಪರಾಧಿ
ಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು.

ಪ್ರಕರಣ ನಡೆದ ತಕ್ಷಣ ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದಾರೆ. ಬೋರ್ವೆಲ್ ನಲ್ಲಿ ಹಾಕಿದಂತ ದೇಹವನ್ನು ತೆಗೆಸಿ ಕ್ರಮ ತೆಗೆದುಕೊಂಡಿದ್ದಾರೆ ಎಂದು ಈ ವೇಳೆ ಪೊಲೀಸರನ್ನು ಶ್ಲಾಘಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!