ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರಿನ ಹಂಚಿಕೆ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ರಾಜ್ಯದ ಹಿತಾಸಕ್ತಿಗೆ ಒತ್ತು ನೀಡಿದ್ದಾರೆ.
ಕರ್ನಾಟಕದ ಜನರ ಕುಡಿಯುವ ನೀರಿನ ಅಗತ್ಯವೇ ಮೊದಲ ಆದ್ಯತೆ ಆಗಿದ್ದು, ಜಲಾಶಯಗಳಲ್ಲಿ ಸಮರ್ಪಕ ನೀರು ಸಂಗ್ರಹವಾಗುವವರೆಗೆ ರಾಜ್ಯದ ಹಕ್ಕುಗಳನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.
ಕುಡಿಯುವ ನೀರೇ ಮೊದಲ ಆದ್ಯತೆ
ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ತಮಿಳುನಾಡು ನೀರಾವರಿ ಮತ್ತು ಕೃಷಿ ಉದ್ದೇಶಕ್ಕಾಗಿ ನೀರು ಕೇಳುತ್ತಿದ್ದರೆ, ಕರ್ನಾಟಕವು ತನ್ನ ಜನರ ಕುಡಿಯುವ ನೀರಿನ ಭದ್ರತೆಗೆ ಆದ್ಯತೆ ನೀಡಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು. ರಾಜ್ಯದಲ್ಲಿ ನೀರಿನ ಲಭ್ಯತೆ ಖಚಿತವಾಗುವವರೆಗೆ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ:
ಸರ್ವಪಕ್ಷ ಸಭೆಯಲ್ಲಿ ಮಹತ್ವದ ಚರ್ಚೆ
ಆಗಸ್ಟ್ 2ರಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಕಾವೇರಿ ನೀರಿನ ವಿಚಾರವಾಗಿ ಸಮಗ್ರ ಚರ್ಚೆ ನಡೆಸಿ ರಾಜ್ಯದ ಪರ ದೃಢ ನಿಲುವು ಕೈಗೊಳ್ಳಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದರು. ಜಲಾಶಯಗಳಿಗೆ ಹೆಚ್ಚಿನ ಒಳಹರಿವು ಬಂದ ಬಳಿಕವೇ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರವಾಗಬೇಕು ಎಂದು ಹೇಳಿದರು.



