ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ಇನ್ಮುಂದೆ ಬೀದಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.
ಧಾರ್ಮಿಕ ಸಮಾರಂಭಗಳು ಆಯಾ ಕೇಂದ್ರಗಳ ವ್ಯಾಪ್ತಿಯಲ್ಲೇ ಆಚರಣೆ ಮಾಡಬೇಕಿದೆ.ಅದು ಬಿಟ್ಟು ಬೀದಿಬದಿಗಳಲ್ಲಿ ಮಾಡುವುದಕ್ಕೆ ಅವಕಾಶ ನೀಡಬೇಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ರೀತಿಯ ಆಚರಣೆಗಳಿಗೆ ಯಾರು ಅವಕಾಶ ನೀಡಬಾರದು. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರಿಗೆ ಹೇಳಿದ್ದಾರೆ.