ಕಾವೇರಿ ಆರತಿಗೆ ಯಾವುದೇ ನಿರ್ಬಂಧ ಇಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟಿಸ್‌ಗಳಿಗೆ ಸರ್ಕಾರ ಕಾನೂನು ಬಾಹ್ಯವಾಗಿ ಉತ್ತರ ನೀಡಲಿದ್ದು, ಪೂಜೆ ಮತ್ತು ಪ್ರಾರ್ಥನೆಗೆ ನಿರ್ಬಂಧ ಇಲ್ಲವೆಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, “ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಪ್ರತಿದಿನವೂ ಆರತಿ ನಡೆಯುತ್ತಿದೆ. ಕೆಲವರಿಗೆ ಈ ಬಗ್ಗೆ ಆತಂಕವಿದೆ. ಸರ್ಕಾರ ಕಾನೂನುಬದ್ಧ ರೀತಿಯಲ್ಲಿ ಸ್ಪಷ್ಟನೆ ನೀಡಲಿದೆ,” ಎಂದು ಹೇಳಿದ್ದಾರೆ.

ಇದರೊಂದಿಗೆ, ಕಾಂಗ್ರೆಸ್‌ನ ರಾಷ್ಟ್ರೀಯ ಮುಖಂಡ ಸುರ್ಜೆವಾಲಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರು ಶಾಸಕರನ್ನು ಪ್ರತ್ಯೇಕವಾಗಿ ಭೇಟಿಯಾಗಲಿರುವ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿ, “ಅವರು ಖುದ್ದಾಗಿ ಶಾಸಕರೊಂದಿಗೆ ಭೇಟಿಯಾಗಲಿದ್ದಾರೆ. ಈ ಬಗ್ಗೆ ಶಾಸಕರಿಗೆ ಅವರು ಈಗಾಗಲೇ ತಿಳಿಸಿದ್ದು, ನಾನು ಸಹ ಶಾಸಕರಿಗೆ ಮಾಹಿತಿ ನೀಡಿದ್ದೇನೆ,” ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!