ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆದಾಯ ಹೆಚ್ಚಿಸಲು ಸಿದ್ದರಾಮಯ್ಯ ಸರ್ಕಾರ ಅಬಕಾರಿ ಸುಂಕ ಹೆಚ್ಚಿಸಿದೆ. ಅನ್ನಭಾಗ್ಯ ಅಕ್ಕಿಗೆ ನೀಡುವ ಹಣ ಅಬಕಾರಿ ಇಲಾಖೆಗೆ ಹೋಗುತ್ತೆ. ಆ ಅನ್ನಭಾಗ್ಯದ ಹಣವನ್ನು ತೆಗೆದುಕೊಂಡು ಮನೆಗೆ ಹೋಗುತ್ತಾನೋ, ಇನ್ನೆಲ್ಲಿಗೆ ಹೋಗುತ್ತಾನೋ ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ನಲ್ಲಿ ವಿಶೇಷತೆ ಏನಿಲ್ಲ ಎಂದಿದ್ದಾರೆ. ಬಜೆಟ್ಗಳ ಅಧ್ಯಯನ ಮಾಡಿದ್ದೇನೆ ಎಂದ ಹೆಚ್.ಡಿ ಕುಮಾರಸ್ವಾಮಿ, ಒಂದೇ ವರ್ಷಕ್ಕೆ ಜನರ ಮೇಲೆ 85,000 ಕೋಟಿ ಸಾಲ ಹೇರುತ್ತಿದ್ದಾರೆ. 1995ರಿಂದ ಈವರೆಗೆ ಸಿದ್ದರಾಮಯ್ಯ ಮಂಡಿಸಿದ 13 ಬಜೆಟ್ಗಳ ಅಧ್ಯಯನ ಮಾಡಿದ್ದೇನೆ. ದುಡಿಯುವ ಕೈಗಳಿಗೆ ಸ್ವಾವಲಂಭಿಯಾಗಿಸಲು ಯೋಜನೆ ಏನು ಎಂದು ಪ್ರಶ್ನಿಸಿದರು.
ಇನ್ನೂ ಎರಡು ಗ್ಯಾರಂಟಿಗಳನ್ನು ಕೊಡಿ ನಮ್ಮದೇನು ತಕರಾರಿಲ್ಲ. ಗ್ಯಾರಂಟಿಗಳಿಗೆ ವರ್ಷಕ್ಕೆ 50-60 ಸಾವಿರ ಕೋಟಿ ವೆಚ್ಚ ಆಗಲಿದೆ. ಬೇರೆ ಯಾವುದಕ್ಕೂ ಬಜೆಟ್ನಲ್ಲಿ ಸರ್ಕಾರ ಹಣ ಮೀಸಲಿಟ್ಟಿಲ್ಲ. ಕೇಂದ್ರ ಮತ್ತು ಹಿಂದಿನ ಸರ್ಕಾರವನ್ನು ದೂಷಿಸುವ ಬಜೆಟ್ ಅಷ್ಟೇ ಎಂದು ವ್ಯಂಗ್ಯವಾಡಿದರು.