ಮುಖದ ಮೇಲೆ ಧೂಳು ಇತ್ತು, ಆದ್ರೆ ಕನ್ನಡಿ ಸ್ವಚ್ಛಗೊಳಿಸುವಂತೆ ನಟಿಸುತ್ತಿದ್ದರು: ಕೇಜ್ರಿವಾಲ್ ಬಂಗಲೆ ನವೀಕರಣಕ್ಕೆ ಅಶ್ವಿನಿ ವೈಷ್ಣವ್ ಟೀಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರ ಅಧಿಕೃತ ನಿವಾಸವನ್ನು ನವೀಕರಿಸಲು ಸುಮಾರು ₹45 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಬಿಜೆಪಿ (BJP) ಆರೋಪಿಸಿದೆ.

ಬಿಜೆಪಿ ಆ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕೇಜ್ರಿವಾಲ್ ಅವರು ಸರ್ಕಾರದ ಹಣದಿಂದ ₹45 ಕೋಟಿ ರೂಪಾಯಿ ಖರ್ಚು ಮಾಡಿ ತಮ್ಮ ಬಂಗಲೆಯನ್ನು ನವೀಕರಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶಾಯರಿ ಟ್ವೀಟ್ ಮೂಲಕ ಕೇಜ್ರಿವಾಲ್​​ನ್ನು ಕುಟುಕಿದ್ದಾರೆ.

ಮುಖದ ಮೇಲೆ ಧೂಳು ಇತ್ತು, ಅವರು ಕನ್ನಡಿ ಸ್ವಚ್ಛಗೊಳಿಸುವಂತೆ ನಟಿಸುತ್ತಿದ್ದರು ಎಂದು ಅಶ್ವಿನಿ ವೈಷ್ಣವ್ ಟ್ವೀಟ್ ಮಾಡಿದ್ದಾರೆ. ಅಂದಹಾಗೆ ಕೇಂದ್ರ ಸಚಿವರು ತಮ್ಮ ಟ್ವೀಟ್​​ನಲ್ಲಿ ಯಾರ ಹೆಸರನ್ನು ಉಲ್ಲೇಖಿಸದೇ ಇದ್ದರೂ ಆಪರೇಷನ್ ಶೀಶ್ ಮಹಲ್ ಎಂಬ ಹ್ಯಾಶ್‌ಟ್ಯಾಗ್ ಅನ್ನು ಬಳಸಿದ್ದಾರೆ.
ಇತ್ತ ಬಿಜೆಪಿ, ಇದು ಕೇಜ್ರಿವಾಲ್ ಅವರ ನಿಜವಾದ ಮುಖ. ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!