ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಪಾಕಿಸ್ತಾನದ ಉಗ್ರರ ಕ್ಯಾಂಪ್ಮೇಲೆ ದಾಳಿ ನಡೆಸಿದ್ದು, ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದೆ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ.
ಭಾರತ ತೀವ್ರ ಪರಿಣಾಮಗಳನ್ನ ಎದುರಿಸಬೇಕಾಗುತ್ತದೆ, ಅವರು ಮಾಡಿದ ತಪ್ಪಿಗೆ ಭಾರೀ ಬೆಲೆ ತೆರಬೇಕಾಗುತ್ತದೆ. ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ. ನಾವು ದೇಶವನ್ನು ರಕ್ಷಿಸಲು ನಮ್ಮ ಕೊನೆಯುಸಿರು ಇರುವವರೆಗೂ ಹೋರಾಡುತ್ತೇವೆ ಎಂದಿದ್ದಾರೆ.
ಅಲ್ಲದೇ ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿ ಕುರಿತು ಮತ್ತೆ ಪ್ರಸ್ತಾಪಿಸಿದ ಷರೀಫ್, ಪಹಲ್ಗಾಮ್ ದಾಳಿ ನಡೆದಾಗ ನಾನು ಟರ್ಕಿಗೆ ಭೇಟಿ ನೀಡಿದ್ದೆ. ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಆಗಲೇ ನಾವು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ, ತನಿಖೆಗೆ ಸಹಕರಿಸಲೂ ಸಿದ್ಧರಿದ್ದೇವೆ ಎಂದು ಹೇಳಿದ್ದೆವು. ಆದರೆ ಭಾರತ ನಮ್ಮ ಸ್ಪಷ್ಟನೆಯನ್ನು ಸ್ವೀಕರಿಸದೇ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.