‘ಜನವರಿ ಒಂದರಿಂದ ಬಸ್ ಸಂಚಾರ ಇರುವುದಿಲ್ಲ, ಸಹಕರಿಸಿ’ ಎಲ್ಲೆಡೆ ಕರಪತ್ರ ಹಂಚಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ.

ಡಿಸೆಂಬರ್ 31 ರಿಂದ ಸಾರಿಗೆ ಮುಷ್ಕರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಮುಷ್ಕರ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಬುಧವಾರದಿಂದಲೇ ಸಾರಿಗೆ ನೌಕರರ ಸಂಘಟನೆಗಳು ಸಕ್ರಿಯವಾಗಿವೆ. ಡಿಸೆಂಬರ್ 31 ರಿಂದ ರಾಜ್ಯದಲ್ಲಿ ಕೆಎಸ್ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಸುಗಳು ಸಂಚಾರ ಮಾಡುವುದು ಅನುಮಾನವಾಗಿದೆ.

‘ಜನವರಿ ಒಂದರಿಂದ ಬಸ್ ಸಂಚಾರ ಇರುವುದಿಲ್ಲ, ಸಹಕರಿಸಿ’ ಎಂದು ಪ್ರಯಾಣಿಕರಿಗೆ ಮತ್ತು ಸಾರಿಗೆ ನೌಕರರಿಗೆ ಬುಧವಾರ ಕರಪತ್ರ ಹಂಚಿಕೆ ಮಾಡಲಾಗಿದೆ. ಮೆಜೆಸ್ಟಿಕ್ ಬಸ್ ಸ್ಟ್ಯಾಂಡ್, ಡಿಪೋ-7 ವೋಲ್ವೋ ಬಸ್ ಡಿಪೋ, ಡಿಪೋ- 13 ಕತ್ರಿಗುಪ್ಪೆ, ಡಿಪೋ-20 ಬನಶಂಕರಿ ಸೇರಿದಂತೆ ಬಿಎಂಟಿಸಿ ಬಸ್ ಡಿಪೋಗಳಿಗೆ ತೆರಳಿ ಡಿಸೆಂಬರ್ 31 ರಿಂದ ಯಾರೂ ಕರ್ತವ್ಯ ನಿರ್ವಹಿಸಬಾರದು ಎಂದು ಕಂಡಕ್ಟರ್, ಡ್ರೈವರ್, ಮೆಕಾನಿಕ್​ಗಳಿಗೆ ಸಾರಿಗೆ ಮುಖಂಡರು ಕರಪತ್ರ ಹಂಚಿದ್ದಾರೆ.

ಈ ವೇಳೆ ಮಾತನಾಡಿದ ಸಾರಿಗೆ ಮುಖಂಡರು, ಶಕ್ತಿ ಯೋಜನೆಯ ಬಾಕಿ ಹಣವೇ ಎರಡು ಸಾವಿರ ಕೋಟಿ ರೂಪಾಯಿಯಷ್ಟು ಇದೆ. ಅದನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!