ಕುಡಿದು ಪ್ರತಿನಿತ್ಯ ಕಿರಿಕಿರಿ ಮಾಡುತ್ತಿದ್ದ ಅಣ್ಣನನ್ನು ಬರ್ಬರವಾಗಿ ಹತ್ಯೆಗೈದ ತಮ್ಮ

ಹೊಸದಿಗಂತ ವರದಿ, ವಿಜಯಪುರ:
ಪ್ರತಿದಿನ ಕುಡಿದು ಬಂದು ಕಿರಿಕಿರಿ ಮಾಡುತ್ತಿದ್ದ ಅಣ್ಣನನ್ನು ತಮ್ಮನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಜಗ್ಗೇಶ ವಡ್ಡರ ಹತ್ಯೆಯಾಗಿರುವ ಯುವಕ. ಜಗ್ಗೇಶ ವಡ್ಡರ ಈತ ಕುಡಿಯಲು ಹಣ ಕೇಳಿ ಪ್ರತಿದಿನ ಕಿರಿಕಿರಿ ಮಾಡುತ್ತಿದ್ದರಿಂದ ರೋಸಿಹೋದ ಆರೋಪಿ ರಾಹುಲ್ ವಡ್ಡರ, ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!