ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಶ್ವರ್ಯ ಗೌಡ ಕೇಸ್ನಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್ ನಡೆಯುತ್ತಿದೆ. ನಿಖಿಲ್, ಅನಿತಾ ಕುಮಾರಸ್ವಾಮಿ ಪರಿಚಯ ಅಂತ ಹೇಳಿ ನಿನ್ನೆ ಮೊನ್ನೆಯಿಂದ ಸುದ್ದಿ ಬರುತ್ತಿದೆ. ಐಶ್ವರ್ಯ ಗೌಡ ನಿಖಿಲ್, ಅನಿತಾ ಅವರನ್ನ ಯಾವಾಗ ಭೇಟಿ ಮಾಡಿದ್ರು? ಈ ಸರ್ಕಾರದಲ್ಲಿ ಎಷ್ಟರ ಮಟ್ಟಿಗೆ ತನಿಖೆ ನಡೆಯುತ್ತಿದೆ ಅನ್ನೋದು ಗೊತ್ತಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಕೇಸ್ ಹಿನ್ನೆಲೆ ತಿಳಿದಿಕೊಂಡಿದ್ದೇನೆ. ಕಾಂಗ್ರೆಸ್ ಸರ್ಕಾರದಲ್ಲಿ ಯಾರನ್ನು ಯಾವಾಗ ಏನ್ ಬೇಕಾದ್ರು ಮಾಡ್ತಾರೆ ಎಂದರು.