ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಿಲ್ಲಿ ಅಪೋಲೋ ಆಸ್ಪತ್ರೆಯಲ್ಲಿ ಮಿದುಳಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದರೂ ಆಸ್ಪತ್ರೆಯ ಮಂಚದಲ್ಲಿಯೇ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ತಮ್ಮ ಎಂದಿನ ಶೈಲಿಯಲ್ಲಿಯೇ ಹಾಸ್ಯ ಚಟಾಕಿ ಸಿಡಿಸಿದ್ದಾರೆ!
ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ನನ್ನ ತಲೆ ಬುರುಡೆಯನ್ನು ಕತ್ತರಿಸಿ ಏನನ್ನೋ ಹುಡುಕಲ ಪ್ರಯತ್ನಿಸಿದರು. ಆದರೆ ಅವರಿಗೆ ಏನೂ ಸಿಗಲಿಲ್ಲ. ಹೀಗಾಗಿ ಮತ್ತೆ ಪ್ಯಾಚ್ ಮಾಡಿದ್ದಾರೆ. ಇದೀಗ ನಾನು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಪ್ಯಾಚ್ ಮಾಡಿದ ತಲೆಬುರಡೆಯಲ್ಲಿ ಮಲಗಿದ್ದೇನೆ. ಪ್ಯಾಚ್ ಮಾಡಿದ್ದಾರೆ, ಆದರೆ ಮೆದುಳಿಗೆ ಡ್ಯಾಮೇಜ್ ಆಗಿಲ್ಲ ಎಂದು ಹೇಳಿದ್ದಾರೆ!
An Update from Sadhguru… https://t.co/ouy3vwypse pic.twitter.com/yg5tYXP1Yo
— Sadhguru (@SadhguruJV) March 20, 2024