ಹೊಸದಿಗಂತ ಡಿಜಿಟಲ್ ಡೆಸ್ಕ್:
ಅವರು ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದರು, ಆದರೆ ನನ್ನ ಮಗಳನ್ನು ಕೊಲೆ ಮಾಡಿದರು ಎಂದು ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಪೋರೇಟರ್ ನಿರಂಜನ ಹಿರೇಮಠ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ನಗರದಲ್ಲಿ ಮಾತನಾಡಿದ ಅವರು, ನನ್ನ ವಾರ್ಡ್ನಲ್ಲಿ ಎರಡು ಕೊಲೆಗಳು ಆಗಿವೆ. ಮೊದಲು ನನ್ನ ಮಗಳ ಕೊಲೆ ನಡೆಯಿತು. ಬಳಿಕ ಅಂಜಲಿ ಯುವತಿಯ ಕೊಲೆ ನಡೆಯಿತು. ಸಂಚು ರೂಪಿಸಿ ಕೊಲೆ ಮಾಡಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ . ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಕೆಲವರು ರಾಜಕೀಯ ಮಾಡಿ ಈ ರೀತಿ ಮಾಡುತ್ತಿದ್ದಾರೆ. ಕಾಣದ ಕೈ ಕೆಲಸ ಮಾಡುತ್ತಿವೆ. ಜನರೆ ನನ್ನ ಕೈ ಹಿಡಿದಿದ್ದಾರೆ. ನನ್ನ ವಾರ್ಡ್ನಲ್ಲೇ ಅಕ್ರಮ ಚಟುವಟಿಕೆ ಮಾಡುತ್ತಿದ್ದಾರೆ. ಸರ್ಕಾರ ದಕ್ಷ ಪೊಲೀಸ ಅಧಿಕಾರಿ ನೇಮಿಸಬೇಕು. ಸರ್ಕಾರಕ್ಕೆ ಧಮ್ಮ ಇಲ್ಲ, ಅಂದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ವಾಗ್ದಾಳಿ ಮಾಡಿದ್ದಾರೆ.
ಕೂಲಿ ಮಾಡಿ ಬದುಕುವ ಜನಾಂಗದ ಯುತಿ ಕೊಲೆ ಮಾಡಿದ್ದಾರೆ. ನನ್ನ ಮಗಳ ಬಲಿ ಪಡೆದಿದ್ದಕ್ಕೆ ಇಡೀ ಜಗತ್ತು ಆಕ್ರೋಶ ವ್ಯಕ್ತ ಪಡಿಸಿದರು. ಅನೇಕ ರಾಜಕೀಯ ನಾಯಕರು ಮನೆ ಬರುವುದನ್ನು ತಪ್ಪಿಸಿದರು. ರೇವಣ್ಣ ಅವರು ಮನೆ ಬರುತ್ತಿದ್ದರು ಅವರನ್ನು ಬರದಂತೆ ಮಾಡಿದರು. ವೀಣಾ ಕಾಶಪ್ಪನವರ ಅವರು ಕೂಡ ಮನೆ ಬರುವುದಾಗಿ ಹೇಳಿದ್ದರು. ಆದರೆ ಅವರು ಬರದಂತೆ ಮಾಡಿದರು. ಯಾರೊಂದಿಗೆ ಯಾರು ಮಾತನಾಡಿದ್ದಾರೆ ಎಂದು ಎಲ್ಲ ಫೋನ್ ರೆಕಾರ್ಡ್ ಇವೆ. ಗೃಹ ಸಚಿವರು ಏಕೆ ಸುಮ್ಮನಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.