ನನಗೆ ಅಟ್ಯಾಕ್ ಮಾಡಿಸಿದ್ದು ಅವರೇ…ಪೊಲೀಸರ ಮುಂದೆ ರಿಕ್ಕಿ ರೈ ಫಸ್ಟ್ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಕೇಸ್​ಗೆ ಸಂಬಂಧಿಸಿದಂತೆ ರಿಕ್ಕಿ ರೈ ಅವರು ಪೊಲೀಸರ ಮುಂದೆ ಕೆಲವೊಂದು ಹೇಳಿಕೆಗಳನ್ನು ನೀಡಿದ್ದಾರೆ.

ರಾಕೇಶ್ ಮಲ್ಲಿ, ಅನುರಾಧ, ನಿತೀಶ್, ವೈದ್ಯನಾಥನ್ ಹೆಸರು ಪ್ರಸ್ತಾಪಿಸಿದ್ದಾರೆ ಆಸ್ತಿ ವಿಚಾರವಾಗಿ ಗುಂಡಿನ ದಾಳಿ ನಡೆಸಿರುವುದಾಗಿ ರಿಕ್ಕಿ ರೈ ಆರೋಪಿಸಿದ್ದಾರೆ.

ನಾನು ರಷ್ಯಾದಲ್ಲಿದ್ದೆ. ಜಮೀನು ವಿವಾದ ಸಂಬಂಧ ನ್ಯಾಯಾಲಯದಲ್ಲಿ ಕೇಸ್ ಇತ್ತು. ಹೀಗಾಗಿ ನಾನು ರಷ್ಯಾದಿಂದ ಬೆಂಗಳೂರಿಗೆ ಬಂದಿದ್ದೆ. ನಾನು ಬೆಂಗಳೂರಿಗೆ ಬಂದಾಗ ಸದಾಶಿವ ನಗರ ಮತ್ತು ಬಿಡದಿಯಲ್ಲಿ ಇರುತ್ತೇನೆ. ಬಿಡದಿಯಿಂದ ಸದಾಶಿವ ನಗರಕ್ಕೆ ಹೋಗುವಾಗ ಗುಂಡಿನ ದಾಳಿ ನಡೆದಿದೆ ಗಾಯಗೊಂಡಿದ್ದ ನನ್ನನ್ನು ಸ್ನೇಹಿತರು ಮತ್ತು ಚಾಲಕ ಆಸ್ಪತ್ರೆಗೆ ಸೇರಿಸಿದರು ಎಂದು ಹೇಳಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!