ಚುನಾವಣೆ ಬಳಿಕ ವಯನಾಡಿನಿಂದಲೂ ಓಡಿ ಹೋಗ್ತಾರೆ: ರಾಹುಲ್‌ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವ್ಯಂಗ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಂಗ್ರೆಸ್‌ ರಾಜಕುಮಾರನಿಗೆ ವಯನಾಡಿನಿಂದಲೂ ಜನ ಬೆಂಬಲ ಸಿಗುವುದು ಕಷ್ಟಕರ ಆಗಿರೋದ್ರಿಂದ ಅಲ್ಲಿಂದಲೂ ಓಡಿ ಹೋಗ್ತಾರೆ ಎಂದು ಸಂಸದ ರಾಹುಲ್‌ ಗಾಂಧಿ ಅವರನ್ನ ಪ್ರಧಾನಿ ಮೋದಿ (PM Modi) ವ್ಯಂಗ್ಯ ಮಾಡಿದ್ದಾರೆ.

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಮೇಥಿಯಲ್ಲಿ ಜನಬೆಂಬಲ ಸಿಗದೇ ಓಡಿ ಹೋದ ರಾಹುಲ್ ಗಾಂಧಿ (Rahul Gandhi) ವಯನಾಡಿನಿಂದ ಸ್ಪರ್ಧಿಸಿದ್ದಾರೆ. ಇಲ್ಲೂ ಜನ ಬೆಂಬಲ ಸಿಗುವುದು ಕಷ್ಟವಾಗಿದೆ, ಹೀಗಾಗೀ ಅವರ ಗ್ಯಾಂಗ್ ಚುನಾವಣೆ ಮುಗಿಯಲು ಕಾಯುತ್ತಿದೆ. ಚುನಾವಣೆ ಮುಗಿಯುತ್ತಿದ್ದಂತೆ ವಯನಾಡಿನಿಂದಲೂ ಓಡಿ ಹೋಗಲಿದ್ದಾರೆ ಎಂದು ಹಾಸ್ಯ ಮಾಡಿದ್ದಾರೆ.

ಐ.ಎನ್‌.ಡಿ.ಐ.ಎ (I.N.D.I.A) ಒಕ್ಕೂಟದ ನಾಯಕ ಯಾರು? ಎಂದು ಹೇಳಲು ವಿರೋಧ ಪಕ್ಷದ ನಾಯಕರು ವಿಫಲವಾಗಿದ್ದಾರೆ. ಅವರು (ಕಾಂಗ್ರೆಸ್) ಏನು ಬೇಕಾದರೂ ಹೇಳಿಕೊಳ್ಳಬಹುದು. ಆದ್ರೆ ವಾಸ್ತವವೆಂದರೆ ಚುನಾವಣೆಯ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಾಯಕರು ಸೋಲನ್ನು ಒಪ್ಪಿಕೊಂಡಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದ ಅವರು ದೊಡ್ಡ ಪ್ರಮಾಣ ಮತದಾನ ಮಾಡುವ ಮೂಲಕ ಎನ್‌ಡಿಎ ಒಕ್ಕೂಟ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!