ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಳ್ಳರ ಹಾವಳಿ: ಲಾಂಗ್‌ ತೋರಿಸಿ ಚಿನ್ನಾಭರಣ ದೋಚಿ ಎಸ್ಕೇಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ದರೋಡೆಕೋರರು ಹೆಚ್ಚಾಗಿದ್ದು,ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಳ್ಳರ ಹಾವಳಿ ನಿಂತಿಲ್ಲ. ದಶಪಥದ ಹಲವು ಕಡೆ ಪೊಲೀಸ್‌ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ. ಹೊಯ್ಸಳ ವಾಹನಗಳು ಗಸ್ತು ತಿರುಗುತ್ತವೆ. ಆದರೂ ಸಮಯ ಸಾಧಿಸಿ ದರೋಡೆ ಮಾಡುತ್ತಿರುವುದು ಕಂಡುಬರುತ್ತಿದೆ.

ಕಾರು ಪ್ರಯಾಣಿಕರಿಗೆ ಲಾಂಗ್ ತೋರಿಸಿ ಸುಲಿಗೆ (Robbery Case) ಮಾಡಿದ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ಘಟನೆ ನಡೆದಿದೆ.

ಹಿಮಾಚಲಂ ಹಾಗೂ ಅಂಕಯ್ಯ ಎಂಬವರು ಕಾರಿನಲ್ಲಿ ಚನ್ನಪಟ್ಟಣದಿಂದ ಬೆಂಗಳೂರಿಗೆ ಹೋಗುತ್ತಿದ್ದರು.ನಿದ್ರೆ ಮಂಪರು ಬಂದ ಹಿನ್ನೆಲೆಯಲ್ಲಿ ಕಾರು ಚಾಲಕ ಮಾಯಗಾನಹಳ್ಳಿ ಬ್ರಿಡ್ಜ್ ಕೆಳಗೆ ಕಾರ್ ನಿಲ್ಲಿಸಿಕೊಂಡು ಮುಖ ತೊಳೆಯುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಲಾಂಗ್ ತೋರಿಸಿ ಬೆದರಿಸಿ ಮೈಮೇಲೆ ಇದ್ದ ಚಿನ್ನಾಭರಣಗಳನ್ನು ದೋಚಿ ಎಸ್ಕೇಪ್ ಆಗಿದ್ದಾರೆ.

ಸುಮಾರು 9.13 ಲಕ್ಷ ರೂ. ಮೌಲ್ಯದ 166 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದೆ. ರಾಮನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!