ಖ್ಯಾತ ಯಕ್ಷಗಾನ ಭಾಗವತರಾಗಿದ್ದ ತಿಮ್ಮಪ್ಪ ಭಾಗ್ವತ್ ನಿಧನ

ಹೊಸದಿಗಂತ ವರದಿ ಯಲ್ಲಾಪುರ:

ತಾಲೂಕಿನ ಖ್ಯಾತ ಯಕ್ಷಗಾನ ಭಾಗವತರಾಗಿದ್ದ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ ಮಂಗಳವಾರ ರಾತ್ರಿ ಅಪಘಾತದಲ್ಲಿ ನಿಧನರಾಗಿದ್ದಾರೆ.

ತಾಲೂಕಿನ -ಯಲ್ಲಾಪುರ -ಶಿರಸಿ ರಾಜ್ಯ ಹೆದ್ದಾರಿಯ ಹಿತ್ಲಳ್ಳಿ ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಅಪಘಾತ ನಡೆದು, ಕಾರಿನಲ್ಲಿದ್ದ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ ಅವರನ್ನು ಶಿರಸಿಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಧ್ಯರಾತ್ರಿ ನಿಧನ ರಾಗಿದ್ದಾರೆ .ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದರು.
ಯಕ್ಷಗಾನದ ಮಟ್ಟು ಮತ್ತು ರಾಗಗಳಲ್ಲಿ ವಿಶೇಷ ಪರಿಣಿತ ಪಡೆದಿದ್ದ ಇವರ ನಿಧನವು ಯಕ್ಷಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!