Monday, December 29, 2025

ಲಿಫ್ಟ್‌ ಕೇಳೋ ಮುನ್ನ ನಾಲ್ಕು ಸಲ ಯೋಚ್ನೆ ಮಾಡಿ, ಈ ಲೇಡಿಗೆ ಏನಾಯ್ತು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಡ್ರಾಪ್​ ಕೇಳಿದ್ದ ಮಹಿಳೆಯ ಮೂರು ಲಕ್ಷ ಮೌಲ್ಯದ ಚಿನ್ನದ ಸರವನ್ನು ಖದೀಮ ಎಗರಿಸಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ತಿರ್ಲಾಪುರ ಕ್ರಾಸ್​​​ ಬಳಿ ನಡೆದಿದೆ.

ರತ್ನಾ ಬಣಕಾರ್​​ ಸರ ಕಳೆದುಕೊಂಡ ಮಹಿಳೆ. 29 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಖದೀಮ ಪರಾರಿಯಾಗಿದ್ದಾನೆ. ಕಾಗಿನೆಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರತ್ನಾ ಬಣಕಾರ್​​ ಅವರು ಬೈಕ್​​ಗೆ ಕೈ ಮಾಡಿ ಕುಮ್ಮೂರು ಕ್ರಾಸ್​ನಿಂದ ಗುಮ್ಮನಹಳ್ಳಿವರೆಗೆ ಡ್ರಾಪ್ ಕೇಳಿದ್ದಾರೆ.

ಬೈಕ್ ಸವಾರ ಹತ್ತಿಸಿಕೊಂಡಿದ್ದಾನೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ತಿಪಲಾಪುರ ಕ್ರಾಸ್​​ ಬಳಿ ನಮ್ಮ ಸಂಬಂಧಿಕರು ಬರುತ್ತಿದ್ದಾನೆ ಅಂತಾ ರತ್ನಾ ಅವರನ್ನು ಇಳಿಸಿದ್ದಾನೆ. ಈ ವೇಳೆ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಖದೀಮ ಪರಾರಿ ಆಗಿದ್ದಾನೆ.

error: Content is protected !!