ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು ಬಿಡುವ ಬಗ್ಗೆ ಚಿಂತನೆ ನಡೆಸುತ್ತೇವೆ, ಪ್ರಸ್ತಾವನೆ ತೆಗೆದುಕೊಂಡಿದ್ದೇನೆ ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕೊಪ್ಪಳ ನಗರದಲ್ಲಿರುವ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ಬಳಿಕ ಕುಷ್ಟಗಿ ರೈಲ್ವೆ ಮೇಲ್ಸೇತುವೆಯನ್ನು ಉದ್ಘಾಟಿಸಿದರು.
ಉದ್ಘಾಟಿಸಿ ಮಾತನಾಡಿದ ಅವರು, ಕೊಪ್ಪಳದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನ ಕೈಗೊಳ್ಳಲಾಗಿದೆ. ಕೊಪ್ಪಳ ಗಂಗಾವತಿ ಹಾಗೂ ಮುನಿರಾಬಾದ್ ರೈಲು ನಿಲ್ದಾಣದ ಉನ್ನತೀಕರಣಕ್ಕೆ ಅನುದಾನ ನೀಡಲಾಗಿದೆ. ಇನ್ನೂ ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು ಯೋಜನೆಗೆ ಪ್ರಸ್ತಾವನೆ ತೆಗೆದುಕೊಂಡಿದ್ದೇನೆ, ರೈಲು ಬಿಡುವ ಬಗ್ಗೆ ಚಿಂತನೆ ನಡೆಸುತ್ತೇವೆ. ಬಳಿಕ ಅದನ್ನ ಪರೀಶಿಲನೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
Sir. Namma hemme neevu railway minister agirodhu. But sumne helthira yavdhu hosa rail karnataka ge tharlilla. Chickmagalur to thirupathi, sakleshpur to thirupathi, hospet to mangalore rail andhri. Yavdhu barlilla idhu barodhu doubt. Nimma mathige bele siktha ilvo enough center alli gothagtha illa