ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅದಿಕಾರಕ್ಕೇರಿದ್ದು, ಇದೀಗ ಸಿಎಂ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಯುತ್ತಿದೆ.
ಈಗಾಗಲೇ , ಡಿ.ಕೆ ಶಿವಕುಮಾರ್ ಹಾಗು ಸಿದ್ಧರಾಮಯ್ಯ ಮದ್ಯೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಇದೀಗ ಮೂರನೇ ವ್ಯಕ್ತಿ ಎಂಟ್ರಿ ಪಡೆದಿದ್ದರೆ.
ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ( M.B Patil) ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿ ಎಂಬಿ ಪಾಟೀಲ್ ಸಿಎಂ ಯಾರಾಗಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತದೆ ‘ಶಾಸಕರು ಬಯಸಿದರೆ ಅದನ್ನು ಹೈಕಮಾಂಡ್ ಗಣನೆಗೆ ತೆಗೆದುಕೊಂಡು ನಿರ್ಧಾರ ಮಾಡುತ್ತದೆ.ಶಾಸಕರ ಬೆಂಬಲ ಇದ್ದವರು ಮುಖ್ಯಮಂತ್ರಿ ಆಗುತ್ತಾರೆ ಎಂದರು.