ಹೊಸದಿಗಂತ ಡಿಜಿಟಲ್ ಡೆಸ್ಕ್ :
ಇಂದು ನಡೆಯುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಷಣ ಮಾಡಿದರು. ಈ ವೇಳೆ ಪ್ರಧಾನಿ ಮೋದಿ ಸರ್ಕಾರವನ್ನು ಹಾಡಿ ಹೊಗಳಿದರು. ಈ ಸಂದರ್ಭದಲ್ಲಿ ಇನ್ನೆರಡು ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವು, ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಹೇಳಿದರು.
ಇದೇ ವೇಳೆ 80ರ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಭಾಶಯಗಳನ್ನು ಕೋರಿದರು.