ರಾಜಕೀಯ ಅಜೀರ್ಣಕ್ಕೆ ಇದು ಉತ್ತಮ ಉದಾಹರಣೆ: ಕಾಂಗ್ರೆಸ್ ಗೆ ಜೆಪಿ ನಡ್ಡಾ ತಿರುಗೇಟು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ (Nehru Memorial Museum and Library)ವನ್ನು ಕೇಂದ್ರ ಸರಕಾರ ಮರುನಾಮಕರಣ ಮಾಡಿದ್ದೂ, ಇದರ ಬೆನ್ನಲ್ಲೇ ಕಾಂಗ್ರೆಸ್‌ (Congress) ಟೀಕೆ ಮಾಡಲು ಶುರುಮಾಡಿವೆ.

ಇದೀಗ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ (JP Nadda), ಒಂದು ವಂಶಾಡಳಿತವನ್ನು ಮೀರಿದ ನಾಯಕರಿದ್ದಾರೆ ಎಂಬುದನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ಅಸಮರ್ಥತೆ, ರಾಜಕೀಯ ಅಜೀರ್ಣಕ್ಕೆ ಇದು ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ನೆಹರು ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿ (ಎನ್‌ಎಂಎಂಎಲ್) ಅನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಿದ್ದು ಸರ್ಕಾರದ ಕ್ಷುಲ್ಲಕ ಕೃತ್ಯ. ಕಟ್ಟಡಗಳ ಮರುನಾಮಕರಣದಿಂದ ಪರಂಪರೆಗಳು ಅಳಿಸಿಹೋಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದು ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕೆಟ್ಟ ಮನಸ್ಥಿತಿ ಮತ್ತು ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಆಧುನಿಕ ಭಾರತದ ವಾಸ್ತುಶಿಲ್ಪಿ ನೆಹರು ಅವರ ದೊಡ್ಡ ಕೊಡುಗೆಯನ್ನು ಎಂದಿಗೂ ಕಡಿಮೆ ಮಾಡಲು ಅವರಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಸರಣಿ ಟ್ವೀಟ್ ಮೂಲಕ ಉತ್ತರಿಸಿದ ನಡ್ಡಾ, ರಾಜಕೀಯ ಅಜೀರ್ಣಕ್ಕೆ ಶ್ರೇಷ್ಠ ಉದಾಹರಣೆ , ಒಂದು ವಂಶಾಡಳಿತವನ್ನು ಮೀರಿ ನಮ್ಮ ರಾಷ್ಟ್ರವನ್ನು ನಿರ್ಮಿಸಿದ ಮತ್ತು ಸೇವೆ ಸಲ್ಲಿಸಿದ ನಾಯಕರು ಇದ್ದಾರೆ ಎಂಬ ಸರಳ ಸತ್ಯವನ್ನು ಒಪ್ಪಿಕೊಳ್ಳಲು ಅವರು ಅಸಮರ್ಥರಾಗಿದ್ದಾರೆ ಎಂದು ತಿರುಗೇಟು ನೀಡಿದರು.

ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯದಲ್ಲಿ ಪ್ರತಿಯೊಬ್ಬ ಪ್ರಧಾನಿಗೂ ಗೌರವವನ್ನು ನೀಡಲಾಗಿದೆ. ಜವಾಹರಲಾಲ್ ನೆಹರು ಅವರಿಗೆ ಸಂಬಂಧಿಸಿದ ವಿಭಾಗವನ್ನು ಬದಲಾಯಿಸಿಲ್ಲ. ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯವು ರಾಜಕೀಯವನ್ನು ಮೀರಿದ ಪ್ರಯತ್ನವಾಗಿದೆ. ಇದನ್ನು ಅರಿತುಕೊಳ್ಳುವ ದೂರದೃಷ್ಟಿ ಕಾಂಗ್ರೆಸ್‌ಗೆ ಇಲ್ಲ ಎಂದು ಆರೋಪಿಸಿದರು.

ಒಂದು ಕುಟುಂಬದ ಪರಂಪರೆ ಮಾತ್ರ ಉಳಿದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಿಂದಿನ ಎಲ್ಲಾ ಪ್ರಧಾನಿಗಳ ಪರಂಪರೆಯನ್ನು ಅಳಿಸಿಹಾಕುವುದು ಪಕ್ಷದ ಏಕೈಕ ಕೊಡುಗೆಯಾಗಿದೆ. ಈ ವಿಷಯಕ್ಕೆ ಕಾಂಗ್ರೆಸ್‌ನ ವಿಧಾನವು ವ್ಯಂಗ್ಯದಿಂದ ಕೂಡಿದ್ದು ಎಂದು ಬಿಜೆಪಿ ಮುಖ್ಯಸ್ಥರು ಆರೋಪಿಸಿದ್ದಾರೆ.

50 ವರ್ಷಗಳ ಕಾಲ ಭಾರತವನ್ನು ಆಳಿದ ಪಕ್ಷಕ್ಕೆ, ಅವರ ಸಣ್ಣತನವು ನಿಜವಾಗಿಯೂ ದುರಂತವಾಗಿದೆ. ಜನರು ಅವರನ್ನು ತಿರಸ್ಕರಿಸಲು ಕಾರಣವೂ ಇದೇ ಎಂದು ನಡ್ಡಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!