ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕೆಸಿಸಿ ಸೀಸನ್ 3 ರ ಚಾಂಪಿಯನ್ ಆಗಿ ಗಂಗಾ ವಾರಿಯರ್ಸ್ (Ganga Warriors) ಹೊರಹೊಮ್ಮಿದ್ದು, ಕ್ರಿಕೆಟಿಗ ಸುರೇಶ್ ರೈನಾ ಪಂದ್ಯದಲ್ಲಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
29 ಎಸೆತಗಳಲ್ಲಿ ಅಜೇಯ 54 ರನ್ ಬಾರಿಸುವ ಮೂಲಕ ತಂಡವನ್ನು ಗೆಲ್ಲುವಂತೆ ಮಾಡಿದರು. ಅಲ್ಲದೇ, 2 ವಿಕೆಟ್ ಪಡೆಯುವ ಮೂಲಕ ಪಂದ್ಯ ಪುರುಷೋತ್ತಮ ಪ್ರಶಸ್ತಿಗೂ ಕಾರಣವಾದರು.
ಇದೀಗ ಪಂದ್ಯದ ಬಳಿಕ ಸುರೇಶ್ ರೈನಾ ಕಿಚ್ಚ ಸುದೀಪ್ ಗೆ ಧನ್ಯವಾದ ತಿಳಿಸಿದ್ದಾರೆ. ‘ಅಂತಾರಾಷ್ಟ್ರೀಯ ಪಂದ್ಯದಂತೆಯೇ ಆಯೋಜನೆ ಮಾಡಿದ್ದ ಆಯೋಜಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅದರಲ್ಲೂ ಈ ಪಂದ್ಯಾವಳಿಯಲ್ಲಿ ಆಡುವುದಕ್ಕೆ ಅವಕಾಶ ಮಾಡಿಕೊಟ್ಟ ಕಿಚ್ಚ ಸುದೀಪ್ (Kiccha Sudeep) ಅವರಿಗೆ ವಿಶೇಷ ಧನ್ಯವಾದ ತಿಳಿಸಿದ್ದಾರೆ. ಇಂತಹ ಪಂದ್ಯವನ್ನು ನಾನು ಯಾವತ್ತೂ ನೋಡಿಲ್ಲ. ನನಗೆ ಇದು ಮರೆಯಲಾರದ ಕ್ಷಣವಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಈ ಬಾರಿ ಆರು ತಂಡಗಳ ನಡುವೆ ಪಂದ್ಯಾವಳಿ ಆಯೋಜನೆ ಆಗಿತ್ತು. ದಿನಕ್ಕೆ ಮೂರು ಪಂದ್ಯಗಳಂತೆ ಒಟ್ಟು ಆರು ತಂಡಗಳು ಕಪ್ ಗಾಗಿ ಸೆಣೆಸಿದವು