ಹೊಸದಿಗಂತ ವರದಿ ಹಾವೇರಿ:
ಇಲ್ಲಿನ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ 75 ನೇ ಗಣರಾಜ್ಯೋತ್ಸವ ಸಂಭ್ರಮ ಸಡಗರದ ಜರುಗಿತು.
ಹಾವೇರಿ ಜಿಲ್ಲಾಉಸ್ತುವಾರಿ ಸಚಿವ ಶಿವಾನಂದ ಪಾಟೀಲ ರಾಷ್ಟ್ರ ಧ್ವಜಾರೋಹಣ ಮಾಡಿ ಸುಮಾರು ೧೫ ಪ್ಲಟೂನ್ ಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ, ಎನ್ ಸಿಸಿ, ಸೇವಾದಳ, ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಜಿಲ್ಲೆಯ ನೂರಾರು ವಿದ್ಯಾರ್ಥಿಗಳು, ಡಿಸಿ, ಸಿಇಒ, ಎಡಿಸಿ ಸೇರಿದಂತೆ ಜಿಲ್ಲೆಯ ಗಣ್ಯರು, ಸಾರ್ವಜನಿಕರು ಭಾಗಿಯಾಗಿದ್ದರು.