ಇದು ಮಾದರಿ ನೀತಿ ಸಂಹಿತೆ ಅಲ್ಲ…ಮೋದಿ ನೀತಿ ಸಂಹಿತೆ: ಮಮತಾ ಬ್ಯಾನರ್ಜಿ ಟೀಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಜೆಪಿ ನಾಯಕರು ಚುನಾವಣಾ ಪ್ರಚಾರದ ಸಮಯದಲ್ಲಿ ದ್ವೇಷ ಭಾಷಣಗಳನ್ನು ಮಾಡುತ್ತಾರೆ. ಆದರೂ ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ.ಇದು ಮಾದರಿ ನೀತಿ ಸಂಹಿತೆ ಮೋದಿ ನೀತಿ ಸಂಹಿತೆಯಾಗಿ ಪರಿವರ್ತನೆಯಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಬಂಗಾಳದ ಪುರುಲಿಯಾದಲ್ಲಿ ಮಂಗಳವಾರ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮನ್ನು ಮಾತ್ರ ಹಿಂದುಗಳು ಎಂದು ಪರಿಗಣಿಸುತ್ತಾರೆ. ಆದರೆ ಅವರು ಇತರ ಸಮುದಾಯಗಳ ಬಗ್ಗೆ ಯೋಚಿಸುವುದಿಲ್ಲ ಎಂದು ಟೀಕಿಸಿದರು.

ಮೋದಿ ಹಾಗೂ ಇತರ ಬಿಜೆಪಿ ನಾಯಕರು ತಮ್ಮ ದ್ವೇಷ ಭಾಷಣಗಳ ಮೂಲಕ ಕೆಳ ಜಾತಿಯ ಹಿಂದುಗಳು, ಅಲ್ಪಸಂಖ್ಯಾತರು ಮತ್ತು ಇತರ ವರ್ಗದ ಜನರನ್ನು ಬೆದರಿಸುತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಮೌನವಾಗಿದೆ ಎಂದು ಅವರು ಆರೋಪಿಸಿದರು.

ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆ ಅಣಕವಾಗಿದೆ. ಇದನ್ನು ಮೋದಿ ನೀತಿ ಸಂಹಿತೆ ಎಂದು ಮರುನಾಮಕರಣ ಮಾಡಬೇಕು ಎಂದೂ ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!