ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿ ಎಫ್ ಐ ಸಂಘಟನೆಗಳ ಮೇಲೆ ನಡೆದ ಪೊಲೀಸರ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದು ದಾಳಿಯಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಮ್ಮ ಪೊಲೀಸರು ಪಿ ಎಫ್ ಐ ಸಂಘಟನೆ ಮೇಲೆ ದಾಳಿ ನಡೆಸಿಲ್ಲ.ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಯಾಚರಣೆ ನಡೆಸಿದ್ದಾರೆ ಅಷ್ಟೇ. ತಹಶೀಲ್ದಾರ್ ಮೂಲಕ ಪೊಲೀಸರು ಕಾನೂನಾತ್ಮಕವಾಗಿ ಅಗತ್ಯ ಕ್ರಮ ವಹಿಸಿದ್ದಾರೆ ಎಂದರು.
ಬೇರೆ ಬೇರೆ ರಾಜ್ಯಗಳಲ್ಲಿಯೂ ಕಾರ್ಯಾಚರಣೆ ನಡೆದಿದೆ. ಪೊಲೀಸರಿಗೆ ಹತ್ತು ಹಲವು ಮಾಹಿತಿಗಳು ಬಂದಿರುವ ಹಿನ್ನೆಲೆಯಲಿಯೇ ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.