ಇದು ಬಿಜೆಪಿಯ ಅಂತ್ಯದ ಆರಂಭ: ಕೇಂದ್ರ ಸರಕಾರದ ವಿರುದ್ಧ ಗುಡುಗಿದ ಮಹುವಾ ಮೊಯಿತ್ರಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೋಯಿತ್ರ ಲೋಕಸಭಾ ಸದಸ್ಯತ್ವ ರದ್ದಿನ ನಿರ್ಣಯ ಲೋಕಸಭೆಯಲ್ಲಿ ಅಂಗೀಕಾರವಾಗಿದೆ.ಇದರ ಬೆನ್ನಲ್ಲಿಯೇ ಮೊದಲ ಪ್ರತಿಕ್ರಿಯೆ ನೀಡಿರುವ ಮಹುವಾ ಮೊಯಿತ್ರಾ, ನನಗೆ 49 ವರ್ಷ, ನಾನು ಮುಂದಿನ 30 ವರ್ಷಗಳ ಕಾಲ ಸಂಸತ್ತಿನ ಒಳಗೆ, ಸಂಸತ್ತಿನ ಹೊರಗೆ ನಿಮ್ಮೊಂದಿಗೆ ಹೋರಾಡುತ್ತೇನೆ. ಸದಸ್ಯತ್ವ ರದ್ದಿನ ನಿರ್ಣಯ ಅಂಗೀಕರಿಸಿದ ಬಳಿಕ ಸಂಸತ್ತಿನ ಹೊರಗಡೆ ಬಂದು ಏರಿದ ಧ್ವನಿಯಲ್ಲಿ ಮಹುವಾ ಪ್ರತಿಕ್ರಿಯೆ ನೀಡಿದ್ದಾರೆ.

ಎಥಿಕ್ಸ್ ಕಮಿಟಿಗೆ ಸಂಸದ ಸ್ಥಾನದಿಂದ ತೆಗೆದುಹಾಕುವ ಅಧಿಕಾರವಿಲ್ಲ. ಇದು ಬಿಜೆಪಿಯ ಅಂತ್ಯದ ಆರಂಭ. ನನ್ನ ಬಾಯಿ ಮುಚ್ಚಿಸುವ ಮೂಲಕ ಏನು ಮಾಡಲು ಸಾಧ್ಯವಿಲ್ಲ. ನನ್ನ ಬಾಯಿ ಮುಚ್ಚಿಸಿ ಅದಾನಿ ಸಮಸ್ಯೆಯನ್ನು ಮರೆಸಬಹುದು ಎಂದು ಈ ಮೋದಿ ಸರ್ಕಾರ ಭಾವಿಸಿರಬಹುದು. ನಿಜವಾಗಿ ಸಹ ಅದು ಸಾಧ್ಯವಿಲ್ಲದ ಕೆಲಸ. ನಿಮ್ಮ ತರಾತುರಿ ನಿರ್ಧಾರ ನಿಮಗೆ ಅದಾನಿ ಎಷ್ಟು ಮುಖ್ಯ ಎಂಬುದನ್ನು ತೋರಿಸುತ್ತದೆ. ಒಂಟಿ ಮಹಿಳಾ ಸಂಸದೆಯ ಬಾಯಿ ಮುಚ್ಚಿಸಲು ನೀವು ಎಷ್ಟು ಕಾಲ ಕಿರುಕುಳ ನೀಡುತ್ತೀರಿ ನೋಡೋಣ ಎಂದು ಲೋಕಸಭೆಯ ಎದುರು ಸವಾಲೆಸೆದಿದ್ದಾರೆ.

ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ಆಕ್ರಮಣಕಾರಿಯಾಗಿ ಮಹುವಾ ಮೊಯಿತ್ರಾ ಭಾಷಣ ಮಾಡುತ್ತಿದ್ದರು. ಇದಕ್ಕಾಗಿ ಹಣ ಪಡೆದಿರುವ ಆರೋಪ ಇವರ ಮೇಲೆ ಬಂದಿತ್ತು. ಹೀರಾನಂದನಿ ಕಂಪನಿಯ ದರ್ಶನ್ ಹೀರಾನಂದನಿಗೆ ಲೋಕಸಭೆಯ ಲಾಗಿನ್ ವಿವರ ನೀಡಿ ಸಂಕಷ್ಟಕ್ಕೆ ತುತ್ತಾಗಿದ್ದರು.ಪ್ರಶ್ನೆಗಾಗಿ ನಗದು ವಿಷಯದಲ್ಲಿ ನೈತಿಕ ಸಮಿತಿಯ ಶಿಫಾರಸನ್ನು ಲೋಕಸಭೆ ಅಂಗೀಕರಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!