ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ಅವಧಿಯ ಬಜೆಟ್ ಅನ್ನು “ಪ್ರಗತಿಪರ ಬಜೆಟ್” ಎಂದು ಬಣ್ಣಿಸಿದ್ದಾರೆ.
ಈ ಸಂದರ್ಭದಲ್ಲಿ ‘ಎಕ್ಸ್’ ಸಂದೇಶವನ್ನು ಪೋಸ್ಟ್ ಮಾಡಿದ ಯಡಿಯೂರಪ್ಪ, ನವಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು ಈ ಬಜೆಟ್ ದೇಶದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುತ್ತದೆ.
ಚುನಾವಣೆಗೂ ಮುನ್ನ ಜನಪ್ರಿಯ ಘೋಷಣೆಗಳಿರುವ ಬಜೆಟ್ ಮಂಡಿಸದೇ ಕೇಂದ್ರ ಹಣಕಾಸು ಸಚಿವರು ಈ ಮಧ್ಯಂತರ ಬಜೆಟ್ ಮೂಲಕ ನಮ್ಮ ಯುವಕರು, ರೈತರು, ಮಹಿಳೆಯರು ಹಾಗೂ ಅದರಲ್ಲೂ ಹಿಂದುಳಿದ ಮತ್ತು ದುರ್ಬಲ ವರ್ಗದ ಜನರ ಜೀವನಮಟ್ಟ ಸುಧಾರಿಸುವ ವಾಸ್ತವಿಕ ಬಜೆಟ್ ಮಂಡಿಸಿದ್ದಾರೆ. ಹೊಸ ಭರವಸೆಗಳು ಮತ್ತು ಅವಕಾಶಗಳನ್ನು ರಚಿಸಿದ್ದಾರೆ.
ಮುಂದಿನ ದಿನಗಳಲ್ಲಿ ಬಲಿಷ್ಠ, ಸಶಕ್ತ ಮತ್ತು ಅಭಿವೃದ್ಧಿ ಹೊಂದಿದ ಜಾಗತಿಕ ಗುರು ಭಾರತವನ್ನು ನಿರ್ಮಿಸುವ ಎನ್ಡಿಎ ಸರ್ಕಾರದ ಬದ್ಧತೆಯನ್ನು ಈ ಬಜೆಟ್ ಪುನರುಚ್ಚರಿಸುತ್ತದೆ ಮತ್ತು ದೇಶದ ಪ್ರಗತಿಗೆ ಪೂರಕವಾಗಿದೆ. ಯಡಿಯೂರಪ್ಪ ಅವರು ಬಜೆಟ್ ಅನ್ನು ಸ್ವಾಗತಿಸಿದ್ದಾರೆ..