ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು: ಬೇಸರದಿಂದ ಮಾತನಾಡಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು. ಪ್ಲೀಸ್ ಅಂಡರ್‌ಲೈನ್ ದಿಸ್ ವರ್ಡ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರದಿಂದ ನುಡಿದರು.

ನಾನು ಯಾಕೆ ರಾಜೀನಾಮೆ ಕೊಡಲಿ? ನಾನು ಏನು ತಪ್ಪು ಮಾಡಿದ್ದೇನೆ ಹೇಳಿ? ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ. ನನ್ನ ಕಂಡರೇ ವಿಪಕ್ಷಗಳಿಗೆ ಭಯ. ಹೀಗಾಗಿ ಪದೇ ಪದೆ ನನ್ನ ಟಾರ್ಗೆಟ್ ಮಾಡುತ್ತಾರೆ ಎಂದು ಟೀಕಿಸಿದರು.

ಇದು ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್. ನಾನು ಮತ್ತೆ ಹೇಳುತ್ತಿದ್ದೇನೆ. ಇದು ರಾಜಕೀಯ ಸಂಬಂಧದ ಮೊದಲ ಕೇಸ್. ಪ್ಲೀಸ್ ಅಂಡರ್‌ಲೈನ್ ದಿಸ್ ವರ್ಡ್. ಕಾನೂನು ಹೋರಾಟವನ್ನ ನಮ್ಮ ವಕೀಲರು ಮಾಡುತ್ತಾರೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!