ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಯಾವುದೇ ತಪ್ಪು ಮಾಡಿಲ್ಲ, ಮುಂದೆ ಮಾಡುವುದಿಲ್ಲ. ರಾಜಕೀಯ ದುರುದ್ದೇಶದಿಂದ ಇದನೆಲ್ಲ ಮಾಡ್ತಿದ್ದಾರೆ. ರಾಜಕೀಯವಾಗಿ ನಾವು ಎದುರಿಸುತ್ತೇವೆ. ನನ್ನನ್ನು ರಾಜಕೀಯವಾಗಿ ಮುಗಿಸಿದ್ರೆ, ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡುತ್ತಿದ್ದಂತೆ ಬಿಜೆಪಿ ಸಿಎಂ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ. ಮತ್ತೊಂದೆಡೆ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ನಾನು ಮಾನಸಿಕವಾಗಿ ಇನ್ನೂ ಸ್ಟ್ರಾಂಗ್ ಆಗಿದ್ದೇನೆ. ರಾಜಕೀಯದಲ್ಲಿ ಇದೆಲ್ಲ ಸಹಜ, ತಪ್ಪು ಮಾಡಿಲ್ಲ ಹಾಗಾಗಿ ಭಯ ಇಲ್ಲ ಎಂದು ಹೇಳಿದ್ದಾರೆ.