ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಈ ಬಾರಿನೂರಕ್ಕೆ ನೂರು ಗೆಲುವು ಸಾಧಿಸಿತ್ತಾರೆ. ಸುರೇಶ್ ಗೆಲುವಿನ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಹಾಗೂ ಕ್ಷೇತ್ರದ ಪ್ರಗತಿಗೆ ಡಿಕೆ ಸುರೇಶ್ ಅವರು ನಿರಂತರವಾಗಿ ಶ್ರಮಿಸಿದ್ದಾರೆ. ಅದಕ್ಕಾಗಿಯೇ ಕಾಂಗ್ರೆಸ್ ಅವರನ್ನು ಮತ್ತೆ ನಾಮನಿರ್ದೇಶನ ಮಾಡಿದೆ. ನೀವು ಅವರನ್ನು ಪ್ರತಿನಿಧಿಯಾಗಿ ತೆಗೆದುಕೊಂಡು ದೆಹಲಿಗೆ ಕಳುಹಿಸಿದರೆ ಅವರು ನಿಮ್ಮ ವಕ್ತಾರರಂತೆ ಪ್ರತಿನಿಧಿಸುತ್ತಾರೆ ಎಂದು ಹೇಳಿದರು.
ಸರ್ಕಾರ ಬಂದ ದಿನದಿಂದ ತಿಂಗಳೊಳಗೆ ಐದು ಗ್ಯಾರಂಟಿ ಕೊಟ್ಟಿದ್ದೇವೆ. ಬಿಜೆಪಿ ಯಾವುದೇ ಭರವಸೆಯನ್ನು ಇನ್ನೂ ಈಡೇರಿಸಿಲ್ಲ. ಹಾಗಾದರೆ ಬಿಜೆಪಿಗೆ ಮತ ಹಾಕುವುದರಿಂದ ಆಗುವ ಲಾಭಗಳೇನು ಎಂಬುದನ್ನು ತಾವೇ ಪ್ರಶ್ನಿಸಿಕೊಳ್ಳಿ ಎಂದರು.