BUDGET | ಈ ಬಾರಿ ನೀರಾವರಿ ಯೋಜನೆಗೆ ಸರ್ಕಾರ ಒತ್ತು, ಏನೆಲ್ಲಾ ಸಿಕ್ತು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ಈ ಬಾರಿ ನೀರಾವರಿ ಯೋಜನೆಗೆ ಸರ್ಕಾರ ಒತ್ತು ನೀಡಿದೆ. ಏನೆಲ್ಲಾ ಸಿಕ್ಕಿದೆ ನೋಡಿ..

  • ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟ್ ಅನ್ನು 524.256 ಮೀಟರ್ ವರೆಗೆ ಎತ್ತರಿಸುವುದು, ರೈತರಿಗೆ ಪರಿಹಾರ ವಿತರಣೆಗೆ ಕ್ರಮ.
  • ಕಳಸಾ – ಬಂಡೂರಾ ನಾಲಾ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕಾಮಗಾರಿ ಆರಂಭ.
  • ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ.
  • ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಕಾಲಮಿತಿಯೊಳಗೆ ಪೂರ್ಣ.
  • 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿ ಅನುಷ್ಟಾನಗೊಳಿಸಲು ಕ್ರಮ.
  • ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮ.
  • ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆ ಅನುಷ್ಠಾನ.
  • ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡ ಜಾರಿ.
  • ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಕಾಮಗಾರಿಗಳ ಪೂರ್ಣಗೊಳಿಸಲು ಕ್ರಮ.
  • ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಿಗೆ 2 ಸಾವಿರ ಕೋಟಿ ರೂ.
  • ಸಣ್ಣ ನೀರಾವರಿ: ಎತ್ತಿನಹೊಳೆ ಯೋಜನೆಯಿಂದ ಮಧುಗಿರಿ ತಾಲೂಕಿನ 45 ಕೆರೆಗಳು, ಕೊರಟಗೆರೆ ತಾಲೂಕಿನ 62 ಕೆರೆಗಳಿಗೆ ನೀರು ತುಂಬಿಸಲು 553 ಕೋಟಿ ರೂ. ಅನುಷ್ಠಾನಗೊಳಿಸಲು ಕ್ರಮ.
  • 1,080 ಕೋಟಿ ರೂ. ಮೊತ್ತದ ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆ.
- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!