ಹೊಸದಿಗಂತ ವರದಿ,ಶಿವಮೊಗ್ಗ :
ಕಂದಾಯ ಸಚಿವ ಆರ್.ಅಶೋಕ್ ಜ.28ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲೂಕಿನ ಹೊಳಲೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಸಂಬಂದಿಸಿದ ಎಲ್ಲಾ ತಾಲೂಕು ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಡಾ. ನಾಗರಾಜ್ ಸೂಚನೆ ನೀಡಿದ್ದಾರೆ.
ಗ್ರಾಮ ವಾಸ್ತವ್ಯ ಕುರಿತು ಪೂರ್ವಭಾವಿಯಾಗಿ ಚರ್ಚಿಸಲು ತಾಲೂಕು ಕಚೇರಿಯಲ್ಲಿ ಸೋಮವಾರ ಕರೆಯಲಾಗಿದ್ದ ತಾಲೂಕು ಮಟ್ಟದ ಅಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜ.28 ರಂದು ತಾಲೂಕಿನ ಹೊಳಲೂರು ಮಾರುತಿ ಪ್ರೌಢಶಾಲೆ ಆವರಣದಲ್ಲಿ ಬೆಳಗ್ಗೆ 11ರಿಂದ ಗ್ರಾಮ ವಾಸ್ತವ್ಯ ಆರಂಭವಾಗಲಿದೆ. ತಾಲೂಕು ಕಚೇರಿ ವ್ಯಾಪ್ತಿಯ 41 ಇಲಾಖೆಗಳಿಗೆ ಈಗಾಗಲೇ ಸಿದ್ಧತೆ ಕುರಿತು ಮಾಹಿತಿ ನೀಡಲಾಗಿದೆ. ಅವಶ್ಯಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಫಲಾನುಭವಿಗಳ ಪಟ್ಟಿ ತಯಾರಿಸಿ, ಅವರಿಗೆ ಸೂಕ್ತ ಆಸನ ವ್ಯವಸ್ಥೆ ಮಾಡಬೇಕು. ಆದೇಶಗಳ ಸುಗಮ ವಿತರಣೆಗೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು.