ಬಾವಾ ಮಾಡಿರುವ ಅಭಿವೃದ್ಧಿಗೆ ಈ ಬಾರಿ ಮತದಾರರು ಕೈ ಹಿಡಿಯಲಿದ್ದಾರೆ: ದೇವೇಗೌಡ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿದ್ದು ಹಿಂದಿನ ಶಾಸಕ ಮೊಯಿದೀನ್ ಬಾವಾ ಅವರ ಅವಧಿಯಲ್ಲಿ. ಅವರಿಗೆ ಕಾಂಗ್ರೆಸ್ ಪಕ್ಷದ ನಾಯಕರು ಮೋಸದಿಂದ ಟಿಕೆಟ್ ಸಿಗುವುದನ್ನು ತಪ್ಪಿಸಿದರು. ನಾವು ಅವರಲ್ಲಿ ಧೈರ್ಯ ತುಂಬಿ ಜೆಡಿಎಸ್ ನಿಂದ ಟಿಕೆಟ್ ನೀಡಿದ್ದೇವೆ. ಬಾವಾ ಮಾಡಿರುವ ಅಭಿವೃದ್ಧಿ, ತ್ಯಾಗಕ್ಕೆ ಈ ಬಾರಿ ಮತದಾರರು ಕೈ ಹಿಡಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾವಾ ಅವರು ಮೂರನೇ ನಂಬರ್ ನಲ್ಲಿ ಇದ್ದಾರೆ. ಭತ್ತದ ತೆನೆ ಹೊತ್ತ ಅನ್ನಪೂರ್ಣೇಶ್ವರಿಯ ಚಿಹ್ನೆ ಅವರದ್ದಾಗಿದೆ. ಮೇ 10ರಂದು ಸಂಜೆ 5 ಗಂಟೆಯ ವರೆಗೆ ಕಾಲಾವಕಾಶ ಇದೆ, ನಾನು ಕೈಮುಗಿದು ಬೇಡಿಕೊಳ್ಳುತ್ತಿದ್ದೇನೆ. ಅವರಿಗೆ ಮತ ಕೊಟ್ಟು ಹರಸಿ. ಜನರಿಗೆ ಬಾವಾ ಮೇಲೆ ವಿಶ್ವಾಸವಿದ್ದು ಅವರು ಮತ ಕೊಟ್ಟು ಗೆಲ್ಲಿಸಲಿದ್ದಾರೆ ಎಂದರು.

ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳಾದ ಮೊಯಿದೀನ್ ಬಾವಾ, ಡಾ.ಅಮರಶ್ರೀ, ಸುಮತಿ ಹೆಗ್ಡೆ, ಯುವಜನತಾದಳದ ಅಕ್ಷಿತ್ ಸುವರ್ಣ, ಜಿಲ್ಲಾಧ್ಯಕ್ಷ ಎಂಬಿ ಸದಾಶಿವ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!