‘ಆಪರೇಷನ್ ಸಿಂದೂರ’ ಬಗ್ಗೆ ಟೀಕೆ ಮಾಡೋರಿಗೆ ಗುಂಡು ಹೊಡಿಬೇಕು: ಕೆ.ಎಸ್.ಈಶ್ವರಪ್ಪ ಕೆಂಡಾಮಂಡಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಪರೇಷನ್ ಸಿಂದೂರದ ಬಗ್ಗೆ ಟೀಕೆ ಮಾಡೋರಿಗೆ ಗುಂಡು ಹೊಡಿಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಕೊತ್ತೂರು ಮಂಜುನಾಥ್, ದಿನೇಶ್ ಗುಂಡೂರಾವ್‌ಗೆ ಗುಂಡು ಹೊಡೆಯಬೇಕು. ಇವರಿಗೆಲ್ಲಾ ಗುಂಡು ಹಾಕಿದರೆ ಮಾತ್ರ ಸರಿ ಹೋಗುತ್ತದೆ. ಇವರೆಲ್ಲಾ ದೇಶದ್ರೋಹಿಗಳು ಎಂದು ಕಿಡಿಕಾರಿದ್ದಾರೆ.

ಸೀನಿಯರ್ ಖರ್ಗೆ ವಿಧಿ ಇಲ್ಲದೆ ಅಲ್ಲೊಂದು ಇಲ್ಲೊಂದು ಮಾತನಾಡುತ್ತಾರೆ. ಆದ್ರೆ ಪಾಕಿಸ್ತಾನ ಪರವಾಗಿ ಮರಿ ಖರ್ಗೆ ಇದ್ದಾರೆ. ಕಾಂಗ್ರೆಸ್ ನಾಯಕರು ಹೌದೋ, ಅಲ್ವೋ ಎಂದೇ ಗೊತ್ತಾಗುತ್ತಿಲ್ಲ. ಇವರ ಬಗ್ಗೆ ಕಾಂಗ್ರೆಸ್‌ನವರಿಂದಲೇ ಟೀಕೆ ಕೇಳಿಬರುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!