ಯಾರಿಗೆ ಕಾಂಗ್ರೆಸ್‌ ಮೇಲೆ ನಂಬಿಕೆ ವಿಶ್ವಾಸ ಇದೆಯೋ ಅಂತವರು ಪಕ್ಷಕ್ಕೆ ಬರ್ತಿದ್ದಾರೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್‌ (Congress) ಪಕ್ಷದ ತತ್ವ ಸಿದ್ಧಾಂತದ ಮೇಲೆ ನಂಬಿಕೆ ವಿಶ್ವಾಸ ಯಾರಿಗೆ ಇದೆಯೋ ಅಂತವರು ಪಕ್ಷಕ್ಕೆ ಬರ್ತಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ತಿಳಿಸಿದ್ದಾರೆ.

ಆಪರೇಷನ್‌ ಹಸ್ತ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಪಕ್ಷದಿಂದ ಯಾವುದೇ ಆಪರೇಷನ್‌ ಮಾಡ್ತಿಲ್ಲ. ಸಿಎಂ, ಡಿಸಿಎಂ ನಾಯಕತ್ವದ ಮೇಲೆ ನಂಬಿಕೆಯಿಟ್ಟು, ಯಾವುದೇ ಷರತ್ತುಗಳಿಲ್ಲದೇ ನಮ್ಮ ಬೇರೆ-ಬೇರೆ ಪಕ್ಷದ ನಾಯಕರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಚಾಲನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯೋಜನೆಗೆ ರಾಜ್ಯದಲ್ಲಿ ಈವರೆಗೆ 1.11 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಕೊನೆಯ ದಿನಾಂಕ ನಿಗದಿಪಡಿಸಿಲ್ಲ, ನಿರಂತರವಾಗಿರುತ್ತೆ. ಮುಂದೆ ಜನರು ಆಶೀರ್ವಾದ ಮಾಡಿದ್ರೆ ಈ ಯೋಜನೆ ನಿರಂತರವಾಗಿ ಜಾರಿಯಲ್ಲಿರುತ್ತೆ. ಬೇರೆ ಸರ್ಕಾರ ಬಂದರೆ ಇಂತಹ ಯೋಜನೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!