ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಯೋತ್ಪಾದನೆ ನಿರ್ಮೂಲನೆಗೆ ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆಯಲು ಸಿದ್ಧ ಎಂಬುದನ್ನು ಭಾರತೀಯ ಸೇನೆ ನಿರೂಪಿಸಿದೆ.
ಸೇನಾಧಿಕಾರಿಗಳು ಆಪರೇಷನ್ ಸಿಂಧೂರ ಕುರಿತು ಮಾಹಿತಿ ನೀಡಿದ್ದು, ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರನ್ನು ಪಾಕ್ ಒಳಗೇ ನುಗ್ಗಿ ಹೊಡೆದಿದ್ದೇವೆ, ಇದೇ ಮೊದಲ ಬಾರಿಗೆ ಪಾಕಿಸ್ತಾನದ ಒಳಗೆ ನುಗ್ಗಿ ಲಷ್ಕರ್-ಎ-ತೊಯ್ಬಾ, ಹಿಜ್ಬುಲ್ಲಾದ ಪ್ರಮುಖ ಕಚೇರಿಗಳನ್ನು ಧ್ವಂಸ ಮಾಡಲಾಗಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಮಾಹಿತಿ ನೀಡಿದರು.
ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಲ್ ಸೋಫಿಯಾ ಹಂಚಿಕೊಂಡ ಮಾಹಿತಿ ಈ ಕಾರ್ಯಚರಣೆ ಬೆಳಗಿನ ಜಾವ 1.05ರಿಂದ 1.30ರವರೆಗೆ ನಡೆಯಿತು. ಪಹಲ್ಗಾಮ್ನಲ್ಲಿ ಸಾವನ್ನಪ್ಪಿದ ಪ್ರವಾಸಿಗರಿಗಾಗಿ ಕಾರ್ಯಾಚರಣೆ ನಡೆಸಲಾಯಿತು. ಕಳೆದ 3 ದಶಕಗಳಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ಸೃಷ್ಟಿಸಲಾಗುತ್ತಿದೆ.
ಪಾಕಿಸ್ತಾನ ಮತ್ತು ಪಿಒಕೆಯಲ್ಲಿ 9 ಗುರಿಗಳನ್ನು ಗುರುತಿಸಲಾಯಿತು ಮತ್ತು ನಾವು ಅವುಗಳನ್ನು ನಾಶಪಡಿಸಿದ್ದೇವೆ. ಲಾಂಚ್ಪ್ಯಾಡ್ಗಳು ಮತ್ತು ತರಬೇತಿ ಕೇಂದ್ರಗಳನ್ನು ಗುರಿಯಾಗಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.
ನಾವು ಯಾವುದೇ ನಾಗರಿಕರ ಮೇಲಾಗಲಿ ಅಥವಾ ಪಾಕ್ ಮಿಲಿಟರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿಲ್ಲ, ಕೇವಲ ಉಗ್ರರ ನೆಲೆಗಳನ್ನು ಮಾತ್ರ ಧ್ವಂಸಗೊಳಿಸಿದ್ದೇವೆ ಎಂದು ಖುರೇಷಿ ಸ್ಪಷ್ಟಪಡಿಸಿದ್ದಾರೆ. ನಾಗರಿಕರಿಗೆ ಹಾನಿ ಮಾಡುವುದು ನಮ್ಮ ಉದ್ದೇಶವಲ್ಲ ಎಂದರು.