ಹೊಸದಿಗಂತ ವರದಿ, ವಿಜಯಪುರ :
ಅಕ್ರಮ- ಸಕ್ರಮ ಯೋಜನೆಯಡಿ ಟಿಸಿ ಕೊಡಲು ರೈತನಿಂದ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೈನ್’ಮನ್ ನನ್ನು ಜಿಲ್ಲೆಯಲ್ಲಿ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಲೈನ್ ಮನ್ ಸಂಜೀವ ಶಿವಲಿಂಗಪ್ಪ ಅಂಬಿ ಈತ ಟಿಸಿ ಕೊಡಲು ಹಣಕ್ಕೆ ಬೇಡಿಕೆಯಿಟ್ಟು, ರೈತನಿಂದ 25 ಸಾವಿರ ರೂ. ಪಡೆಯುವಾಗ, ಜಿಲ್ಲೆಯ ಚಡಚಣ ಪಟ್ಟಣದ ಮರಗೂರ ಕ್ರಾಸ್ ಬಳಿಯ ಬಸ್ ನಿಲ್ದಾಣದಲ್ಲಿ ಎಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಎಸಿಬಿ ಪೊಲೀಸ್’ರು ದಾಳಿ ನಡೆಸಿದ್ದಾರೆ