ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರಿಲೀಫ್ ಸಿಕ್ಕ ಬೆನ್ನಲ್ಲೇ ಪವಿತ್ರಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಾಣದ ಕೈಗಳಿಂದ ಸಾವಿರಾರು ಕುತಂತ್ರಗಳು ನಡೆದರೇನಂತೆ ಎಂದು ಬರೆದುಕೊಂಡಿದ್ದಾರೆ.
ಕಾಣದ ಕೈಗಳಿಂದ ಸಾವಿರಾರು ಕುತಂತ್ರಗಳು ನಡೆದರೇನಂತೆ ಮೇಲೊಬ್ಬ ಎಲ್ಲವನ್ನು ವೀಕ್ಷಿಸುತ್ತಿರುವನು. ನಿಮ್ಮ ಕಣ್ಣೀರಿನ ಎಲ್ಲಾ ಹನಿಗಳಿಗೆ ನ್ಯಾಯ ನೀಡುವನು ಎನ್ನುವ ಕೋಟ್ ಅನ್ನು ಇನ್ಸ್ಟಾಗ್ರಾಂ ಖಾತೆಯಲ್ಲಿ ನಟಿ ಪೋಸ್ಟ್ ಮಾಡಿದ್ದಾರೆ.
ಇದೀಗ ನಟಿ ಯಾರಿಗೆ ಟಾಂಗ್ ಕೊಟ್ಟು ಬರೆದಿದ್ದಾರೆ ಎಂದು ಚರ್ಚೆ ನಡೆಯುತ್ತಿದೆ.
ಸಿನಿಮಾ ರಂಗದ ಸಾಮ್ರಾಟರೊಬ್ಬರ ಅಣತಿಯಂತೆ ದರ್ಶನ್ ಮತ್ತು ತಂಡದ ಮೇಲೆ ವ್ಯವಸ್ಥಿತವಾಗಿ ಕಾಂಗ್ರೆಸ್ ಸರಕಾರ ಷಡ್ಯಂತ್ರ ನಡೆಸಿದೆ.ಈವರೆಗೂ ಸಿನಿಮಾ ರಂಗದಲ್ಲಿ ಅದ್ಭುತವಾಗಿ ಮಿಂಚುವ ಹಲವರ ದುರಂತ ಅಂತ್ಯದಲ್ಲಿ ಪವಿತ್ರಾ ಗೌಡ ತಿಳಿಸಿದ ಕಾಣದ ಬಲಿಷ್ಠ ಕೈಗಳ ಕೈವಾಡವಿದ್ದರೂ ಮಾಧ್ಯಮಗಳು ಕಣ್ಣು ಮುಚ್ಚಿ ಜಾಣ ಕುರುಡು ತೋರುವ ಮತ್ತು ತಮ್ಮ ಪ್ರಸಾರ ಹೆಚ್ಚಿಸುವ ಕಾರ್ಯದಲ್ಲಿ ಮಗ್ನವಾಗಿವೆ.