ನಟ ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ, ಸಿಸಿಬಿಗೆ ಕೇಸ್ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ಕಿಚ್ಚ ಸುದೀಪ್ ಬಿಜೆಪಿ ಪರ ಪ್ರಚಾರ ಮಾಡುತ್ತಾರೆ ಎನ್ನುವ ಸುದ್ದಿ ಹಬ್ಬಿದ ಬೆನ್ನಲ್ಲೇ ನಟನಿಗೆ ಬೆದರಿಕೆ ಪತ್ರಗಳು ಬಂದಿವೆ.

ನಿಮ್ಮ ಖಾಸಗಿ ವಿಡಿಯೋ ಲೀಕ್ ಮಾಡ್ತೇವೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಕೇಸ್ ಇದೀಗ ಸಿಸಿಬಿಗೆ ವರ್ಗಾವಣೆಯಾಗಿದ್ದು, ಪತ್ರಬರೆದ ಕಿಡಿಗೇಡಿಗಳನ್ನು ಹುಡುಕಲಾಗುತ್ತಿದೆ.

ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿಯಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬೆದರಿಕೆ ಪತ್ರ ಬಂದಿದ್ದು, ಸಿಸಿಬಿ ತನಿಖೆ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!