ರಾಷ್ಟ್ರೀಯ ಐಕ್ಯತೆಗೆ ಧಕ್ಕೆ: ಕವಿವಿ ಪಠ್ಯ ವಿವಾದ ಬಗೆಹರಿಸಲು ತಜ್ಞರ ಸಮಿತಿ ರಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಷಯದ ಪಠ್ಯ ವಿವಾದಕ್ಕೆ ಗುರಿಯಾಗಿದೆ. ವಿವಿಯ ಪ್ರಸಾರಂಗದಿಂದ ಮುದಿತ್ರವಾಗಿರುವ ಕನ್ನಡ ವಿಷಯದ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ವಿಷಯಗಳಿವೆ ಎಂಬ ಆರೋಪ ಕೇಳಿಬಂದಿದೆ.

ಬಿಎ, ಬಿ ಮ್ಯೂಸಿಕ್, ಬಿಎಫ್ಎ, ಬಿಎಸ್​​ಡಬ್ಲ್ಯು, ಬಿವಿಎ, ಬಿಎಸ್​ಸಿ ಸೇರಿದಂತೆ ಕೆಲ ಪದವಿಗಳ ಪ್ರಥಮ ಸೆಮಿಸ್ಟರ್​​ನ ‘ಬೆಳಗು 1’ ಕನ್ನಡ ಪಠ್ಯ ಪುಸ್ತಕದಲ್ಲಿನ ರಾಷ್ಟ್ರೀಯ ಆಚರಣೆಯ ಸುತ್ತ ಎಂಬ ಅಧ್ಯಾಯದಲ್ಲಿನ ಕೆಲ ವಿಷಯಗಳು ಆಕ್ಷೇಪಾರ್ಹವಾಗಿವೆ. ಈ ಪಠ್ಯ ಪುಸ್ತಕ ವಾಪಸ್ ಪಡೆದು, ಇದಕ್ಕೆ ಕಾರಣರಾದವರ ಮೇಲೆ ಶಿಸ್ತುಕ್ರಮ ಜರುಗಿಸಬೇಕೆಂದು ಹಿರಿಯ ನ್ಯಾಯವಾದಿ ಅರುಣ ಜೋಶಿ ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡುವ ಅದರಲ್ಲೂ ವಿಶ್ವವಿದ್ಯಾಲಯದಂತಹ ಸಂಸ್ಥೆಯಲ್ಲಿ ಈ ರೀತಿಯ ಪಾಠ ಸೇರಿಸಿರುವುದು ಸಂವಿಧಾನ ವಿರೋಧಿ, ದೇಶ ವಿರೋಧಿ ಮತ್ತು ಭಾರತದ ಏಕತೆಯ ವಿರೋಧಿಯಾಗಿದೆ. ಈ ಕುರಿತು ಶಿಸ್ತು ಕ್ರಮ ಆಗದಿದ್ದರೆ, ಕೋರ್ಟ್​ನಲ್ಲಿ ಪ್ರಕರಣ ದಾಖಲಿಸುತ್ತೇವೆ. ಜೊತೆಗೆ ರಾಜ್ಯಪಾಲರು ಮತ್ತು ಯುಜಿಸಿಗೂ ದೂರು ನೀಡುತ್ತೇವೆ ಎಂದು ಅರುಣ್ ಜೋಶಿ ತಿಳಿಸಿದ್ದಾರೆ.

ವಿವಿ ನಿಯಮಾನುಸಾರ ವಿಶೇಷ ಬಿಒಎಸ್ ಸಭೆ ನಡೆಸಿ, ಅವರು ನೀಡಿರುವ ನಿರ್ಣಯದ ಪ್ರಕಾರ ಡೀನ್ ಕಮಿಟಿಯಲ್ಲಿ ಚರ್ಚಿಸಿ, ಬೆಳಗು 1 ಪಠ್ಯ ಪುಸ್ತಕದ ಪರಿಷ್ಕರಣೆ ಕುರಿತು ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಸಂವಿಧಾನದ ತಜ್ಞರು, ಕನ್ನಡ ಭಾಷಾ ತಜ್ಞರು ಸೇರಿದಂತೆ ನಾಲ್ವರು ವಿಷಯ ತಜ್ಞರಿದ್ದಾರೆ. ಈ ಸಮಿತಿ ಕೊಡುವ ವರದಿ ಮತ್ತು ಸಲಹೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಧಾರವಾಡದ ಕವಿವಿ ಕುಲಪತಿ ಡಾ. ಎಸ್. ಜಯಶ್ರೀ ಮಾಹಿತಿ ನೀಡಿದ್ದಾರೆ.
- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!